LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರೈಲಿನಲ್ಲಿ ಸಾಗಿಸುತ್ತಿದ್ದ 46 ಮದ್ಯದ ಬಾಟಲಿ ವಶ

ಹುಬ್ಬಳ್ಳಿ: ರೇಲ್ವೆ ಇಲಾಖೆಯ ಸತರ್ಕ್ ಕಾರ್ಯಾಚರಣೆಯಡಿಯಲ್ಲಿ ರೈಲಿನಲ್ಲಿ ಸಾಗಿಸುತ್ತಿದ್ದ 8180 ರೂ. ಮೌಲ್ಯದ ವಿವಿಧ ಬ್ರಾಂಡ್ ಗಳ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳಲಾಗಿದೆ.

ಹುಬ್ಬಳ್ಳಿ ವಿಭಾಗದ ಆರ್‌ಪಿಎಫ್ ತಂಡವು ಜು.೮ರಂದು ಧಾರವಾಡ - ಹುಬ್ಬಳ್ಳಿ ರೈಲು ನಿಲ್ದಾಣಗಳ ನಡುವಿನ ರೈಲು ಸಂಖ್ಯೆ 18048 ಎಕ್ಸ್. ವಾಸ್ಕೋ-ಸಾಲಿಮಾರ್‌ನಲ್ಲಿ ವಿಶೇಷ ತಪಾಸಣೆ ನಡೆಸಿದಾಗ ಯಾವುದೇ ಪರವಾನಿಗೆ ಇಲ್ಲದೇ ಪ್ರಯಾಣಿಕರು ಮದ್ಯದ ಬಾಟಲಿಗಳನ್ನು ಸಾಗಿಸುತ್ತಿದ್ದರು. ಪರಿಶೀಲನೆ ಸಮಯದಲ್ಲಿ ವಿವಿಧ ಬ್ರಾಂಡ್‌ಗಳ ಒಟ್ಟು 46 ಮದ್ಯದ ಬಾಟಲಿಗಳನ್ನು ವಶಕ್ಕೆ ಪಡೆದಿದ್ದಾರೆ.



ವಶಪಡಿಸಿಕೊಂಡ ವಸ್ತುಗಳನ್ನು ಹುಬ್ಬಳ್ಳಿಯ ಆರ್‌ಪಿಎಫ್ ಪೋಸ್ಟ್ಗೆ ತರಲಾಗಿದೆ. ವಿಚಾರಣೆಗೊಳಪಡಿಸಿದ ಬಳಿಕ ಮದ್ಯದ ಬಾಟಲಿಗಳನ್ನು ಮುಂದಿನ ಕಾನೂನು ಕ್ರಮಕ್ಕಾಗಿ ಹುಬ್ಬಳ್ಳಿಯ ಅಬಕಾರಿ ನಿರೀಕ್ಷಕರಿಗೆ ಹಸ್ತಾಂತರಿಸಲಾಯಿತು. ಅಬಕಾರಿ ಅಧಿಕಾರಿಗಳು ಈ ಸಂಬAಧ ಕರ್ನಾಟಕ ಅಬಕಾರಿ ಕಾಯ್ದೆಯ ಅಡಿಯಲ್ಲಿ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

ಗೋವಾದಲ್ಲಿ ಮದ್ಯ ಕಡಿಮೆ ದರದಲ್ಲಿ ಲಭಿಸುತ್ತದೆ ಎನ್ನುವ ಕಾರಣಕ್ಕೆ ಕೆಲ ಪ್ರಯಾಣಿಕರು ಇದನ್ನು ದಂಧೆ ಮಾಡಿಕೊಂಡಿದ್ದಾರೆಂದು ಹೇಳಲಾಗುತ್ತಿದೆ. ರೈಲಿನಲ್ಲಿ ಬ್ಯಾಗ್ ಮತ್ತು ಇತರೆ ವಸ್ತುಗಳ ನಡುವೆ ಬಾಟಲಿಗಳನ್ನು ಸಾಗಿಸುವ ತಂತ್ರಗಾರಿಕೆಯನ್ನು ಕೆಲ ಪ್ರಯಾಣಿಕರು ರೂಢಿಸಿಕೊಂಡಿದ್ದಾರೆ. ಈ ಗುಮಾನಿಯ ಮೇರೆಗೆ ಆರ್ ಪಿ ಎಫ್ ತಂಡದವರು ಪರಿಶೀಲನೆ ನಡೆಸಿ, ಅನುಮತಿ ಮತ್ತು ಯಾವುದೇ ದಾಖಲೆ ಇಲ್ಲದ ಮದ್ಯದ ಬಾಟಲಿಗಳನ್ನು ವಶಪಡಿಸಿಕೊಳ್ಳುತ್ತಿದ್ದಾರೆ. 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ