LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chikkaballapura

ಬಿಜಿಎಸ್ ಪಬ್ಲಿಕ್ ಶಾಲೆಯಲ್ಲಿ ಅದ್ದೂರಿಯಾಗಿ 80ನೇ ಸ್ವಾತಂತ್ರ್ಯ ದಿನಾಚರಣೆ

ಬಾಗೇಪಲ್ಲಿ:  ಬಿಜಿಎಸ್ ಪಬ್ಲಿಕ್ ಶಾಲೆ, ಬಾಗೇಪಲ್ಲಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಅತ್ಯಂತ ವಿಜೃಂಭಣೆಯಿಂದ ಹಾಗೂ ದೇಶಭಕ್ತಿಯ ವಾತಾವರಣದಲ್ಲಿ ಆಚರಿಸಲಾಯಿತು.

 

ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಶಿಸ್ತುಬದ್ಧ ಪಥಸಂಚಲನ ಹಾಗೂ ಬ್ಯಾಂಡ್ಸೆಟ್ ವಿವಿಧ ವಿನ್ಯಾಸಗಳ ಆಕರ್ಷಕ ಪ್ರದರ್ಶನ ನಡೆಯಿತು. ನಂತರ ಗಣ್ಯರ ಸಮ್ಮುಖದಲ್ಲಿ ರಾಷ್ಟ್ರಧ್ವಜಾರೋಹಣ ನೆರವೇರಿಸಿ, ರಾಷ್ಟ್ರಗೀತೆ ಹಾಡಲಾಯಿತು.

ಕಾರ್ಯಕ್ರಮದಲ್ಲಿ ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ಅರ್ಪಿಸಿದ ಮಹಾತ್ಮ ಗಾಂಧೀಜಿ ಸೇರಿದಂತೆ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಮಹನೀಯರನ್ನು ಸ್ಮರಿಸಲಾಯಿತು. ಅವರ ತ್ಯಾಗ, ಬಲಿದಾನ ಮತ್ತು ದೇಶಪ್ರೇಮವನ್ನು ವಿದ್ಯಾರ್ಥಿಗಳಿಗೆ ಪರಿಚಯಿಸಿ, ದೇಶದ ಏಕತೆ, ಅಖಂಡತೆ ಮತ್ತು ಸಂಸ್ಕೃತಿಯನ್ನು ಕಾಪಾಡುವ ಜವಾಬ್ದಾರಿ ಪ್ರತಿಯೊಬ್ಬರ ಮೇಲಿದೆ ಎಂದು ತಿಳಿಸಲಾಯಿತು.

 

ಕಾರ್ಯಕ್ರಮದಲ್ಲಿ ಶಿಕ್ಷಣದ ಮಹತ್ವದ ಕುರಿತು ಮಾತನಾಡಿದ ಗಣ್ಯರು, “ಶಿಕ್ಷಣವು ಕೇವಲ ಅಂಕಗಳನ್ನು ಗಳಿಸುವ ಸಾಧನವಲ್ಲ; ಅದು ವ್ಯಕ್ತಿತ್ವ ನಿರ್ಮಾಣದ ಶಕ್ತಿ. ಇಂದಿನ ವಿದ್ಯಾರ್ಥಿಗಳೇ ನಾಳಿನ ಭಾರತದ ಭವಿಷ್ಯಎಂದು ಹೇಳಿದರು. ವಿದ್ಯಾರ್ಥಿಗಳು ಜ್ಞಾನ, ಶಿಸ್ತು, ಸಂಸ್ಕಾರ ಹಾಗೂ ಕೌಶಲ್ಯಗಳನ್ನು ಬೆಳೆಸಿಕೊಂಡು ದೇಶದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

 

ಭಾರತವು ವಿಜ್ಞಾನ, ತಂತ್ರಜ್ಞಾನ, ಶಿಕ್ಷಣ, ಬಾಹ್ಯಾಕಾಶ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ವೇಗವಾಗಿ ಅಭಿವೃದ್ಧಿ ಹೊಂದುತ್ತಿದೆ. ಪ್ರಗತಿಯನ್ನು ಮತ್ತಷ್ಟು ಬಲಪಡಿಸಲು ವಿದ್ಯಾರ್ಥಿಗಳು, ಶಿಕ್ಷಕರು, ಪೋಷಕರು ಹಾಗೂ ಪ್ರತಿಯೊಬ್ಬ ನಾಗರಿಕರ ಸಹಕಾರ ಅಗತ್ಯ ಎಂದು ಗಣ್ಯರು ಅಭಿಪ್ರಾಯಪಟ್ಟರು.

 

ಇದೇ ಸಂದರ್ಭದಲ್ಲಿ 2025–26ನೇ ಸಾಲಿನ 10ನೇ ತರಗತಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಅಲ್ಲದೆ, ಶಾಲೆಯ ಕ್ರೀಡೋತ್ಸವದಲ್ಲಿ ನಾನಾ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಹಾಗೂ ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ರಾಜ ರೆಡ್ಡಿ, ಎಂ.ಎಲ್. ಶಿಕ್ಷಕರು, ಎಸ್.ಟಿ.ಡಿ. ಮೂರ್ತಿ ಹಾಗೂ ಅವರ ಧರ್ಮಪತ್ನಿ ನೇತ್ರಾ ಅವರು ಉಪಸ್ಥಿತರಿದ್ದರು. ಶಾಲೆಯ ಮುಖ್ಯೋಪಾಧ್ಯಾಯರು ವೇದಿಕೆಯನ್ನು ಅಲಂಕರಿಸಿದ್ದರು.

ವಿದ್ಯಾರ್ಥಿಗಳ ಪಥಸಂಚಲನ, ಬ್ಯಾಂಡ್ಪ್ರದರ್ಶನ, ಸನ್ಮಾನ ಹಾಗೂ ಪ್ರಶಸ್ತಿ ಪ್ರದಾನ ಸೇರಿದಂತೆ ವಿವಿಧ ಕಾರ್ಯಕ್ರಮಗಳು ಸ್ವಾತಂತ್ರ್ಯ ದಿನಾಚರಣೆಗೆ ವಿಶೇಷ ಮೆರುಗು ತಂದವು. ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ಪೋಷಕರ ಸಹಕಾರದಿಂದ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ