LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಿವಿಧ ದಲಿತಪರ ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ

ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶ ನಿರಾಕರಣೆ ವಿರುದ್ಧ ಉಗ್ರ ಹೋರಾಟ ಡಿ.ಎಸ್. ವೀರಯ್ಯ

ಬೆಂಗಳೂರು : ಪರಿಶಿಷ್ಟ ಸಮುದಾಯ ಎದುರಿಸುತ್ತಿರುವ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡು ಹಿಡಿಯುವ ಸಲುವಾಗಿ ವಿಧಾನಪರಿಷತ್ ಮಾಜಿ ಸದಸ್ಯ ಡಿ.ಎಸ್. ವೀರಯ್ಯ ನೇತೃತ್ವದಲ್ಲಿ ಶಾಸಕರ ಭವನದ  ಸಭಾಂಗಣದಲ್ಲಿ ವಿವಿಧ ದಲಿತಪರ ಸಂಘಟನೆಗಳು ಮತ್ತು ಎಸ್.ಸಿ. ಎಸ್.ಟಿ ನೌಕರರ ಸಂಘಟನೆಗಳ ಮುಖಂಡರ ಸಭೆ ನಡೆಯಿತು.

ಪಿಟಿಸಿಎಲ್ ಕಾಯ್ದೆ ಸಮರ್ಪಕ ಅನುಷ್ಠಾನ, ಪರಿಶಿಷ್ಟರಿಗೆ ಬಡ್ತಿಯಲ್ಲಿ ಮೀಸಲಾತಿ ಕಲ್ಪಿಸುವಲ್ಲಿ ಆಗುತ್ತಿರುವ ತಾರತಮ್ಯ, ಒಳಮೀಸಲಾತಿ ಸೇರಿದಂತೆ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಗಹನವಾಗಿ ಚರ್ಚೆ ನಡೆಸಿದರು.

ಡಿ.ಎಸ್. ವೀರಯ್ಯ ಮಾತನಾಡಿ, ರಾಜ್ಯ ಸರ್ಕಾರದಲ್ಲಿ ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ಬಡ್ತಿ ಅವಕಾಶಗಳನ್ನು ನಿರಾಕರಿಸಲಾಗುತ್ತಿದೆ. ದಲಿತರ ಹಕ್ಕುಗಳನ್ನು ದಮನ ಮಾಡಲಾಗುತ್ತಿದೆ. ಇದು ಗಂಭೀರ ಸಮಸ್ಯೆಯಾಗಿದ್ದು, ಕೂಡಲೇ ಸಮಸ್ಯೆಗೆ ಪರಿಹಾರ ಕಂಡು ಹಿಡಿಯದಿದ್ದರೆ ಉಗ್ರ ಹೋರಾಟ ಮಾಡುತ್ತೇವೆ ಎಂದು ಹೇಳಿದರು.



ಪರಿಶಿಷ್ಟ ಸಮುದಾಯದ ಅಧಿಕಾರಿಗಳಿಗೆ ನ್ಯಾಯ ಸಿಗುತ್ತಿಲ್ಲ ಎಂದು ಏಐಸಿಸಿ ಅಧ್ಯಕ್ಷ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದು, ಇದು ಸಮಸ್ಯೆಯ ಗಂಭೀರತೆಯನ್ನು ಸೂಚಿಸುತ್ತದೆ. ಇದನ್ನು ವಿಳಂಬ ಮಾಡದೆ ಪರಿಹರಿಸಬೇಕು ಎಂದು ಆಗ್ರಹಿಸಿದರು.

ರಾಜ್ಯ ಸರ್ಕಾರಿ ಎಸ್ಸಿ/ಎಸ್ಟಿ ನೌಕರರ ಸಂಘದ ಅಧ್ಯಕ್ಷ ಡಿ. ಚಂದ್ರಶೇಖರಯ್ಯ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದು ಬಡ್ತಿ ಅನ್ಯಾಯ ಸರಿಪಡಿಸುವಂತೆ ಒತ್ತಾಯಿಸಿದ್ದಾರೆ. ಆದರೆ ಮುಖ್ಯಮಂತ್ರಿ ಅವರು ಈ ಕುರಿತು ಗಮನಹರಿಸಿಲ್ಲ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಲ್ಲಿ 80 ಎಸ್ ಸಿ/ಎಸ್ ಟಿ ನೌಕರರಿಗೆ ಪ್ರಾಂಶುಪಾಲರ ಹುದ್ದೆಗೆ ಬಡ್ತಿ ನಿರಾಕರಿಸಲಾಗಿದೆ. ಈ ಸಮಸ್ಯೆಗೆ ಪರಿಹಾರ ದೊರಕಿಸಿಕೊಡಬೇಕು ಎಂದರು.



ಮಾಜಿ ಸಚಿವೆ, ಸಾಹಿತಿ ಬಿ.ಟಿ. ಲಲಿತಾ ನಾಯಕ್‌ ಮಾತನಾಡಿ, ಮನುಷ್ಯ ಉನ್ನತ ಮಟ್ಟಕ್ಕೆ ಹೋಗುತ್ತಿರುವ ಸಂದರ್ಭದಲ್ಲಿ ಸಮಾನತೆ ಬಗ್ಗೆ ಚಿಂತನೆ ನಡೆಯಬೇಕು. ಸಮ ಸಮಾಜ ನಿರ್ಮಾಣಕ್ಕೆ ಎಲ್ಲರೂ ಗಮನಹರಿಸಬೇಕು. ಪ್ರತಿಯೊಬ್ಬ ವ್ಯಕ್ತಿ ಉನ್ನತಮಟ್ಟಕ್ಕೆ ಏರಲು ಅಂಬೇಡ್ಕರ್‌ ಅವರ ಚಿಂತನೆಗಳನ್ನು ಓದಿ ಮನನ ಮಾಡಿಕೊಳ್ಳಬೇಕು. ದೇವಾಸ್ಥಾನಗಳ ಜಾಗದಲ್ಲಿ ಗ್ರಂಥಾಲಯಗಳಿರಬೇಕು. ಬಾಬಾ ಸಾಹೇಬರ ಬೆಳಕನ್ನು ಪ್ರತಿಯೊಬ್ಬರೂ ಕಾಣಬೇಕು  ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ