LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಆ.23 ರಂದು ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್

ಬೆಂಗಳೂರು:  ನಗರ ಪೊಲೀಸರು ಮತ್ತು ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್  ಸಹಯೋಗದಲ್ಲಿ ಆ,23 ರಂದು ನಗರದ ಶಂಕರ್‌ ನಾಗ್‌ ವೃತ್ತದ ಡೋಂಕಾಳ ಮೈದಾನದಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ವಾಕಥಾನ್ ಹಮ್ಮಿಕೊಳ್ಳಲಾಗಿದೆ.

ಸುದ್ದಿಗೋಷ್ಠಿಯಲ್ಲಿ ವಿವಿ ಪುರಂ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಶಾಮಿದ್ ಬಾಷಾ ಅಧಿಕೃತ ಪೋಸ್ಟರ್ ಹಾಗೂ ಟಿ-ಶರ್ಟ್ ಬಿಡುಗಡೆ ಮಾಡಿ ಮಾತನಾಡಿ, ವಿಶೇಷವಾಗಿ ಯುವಜನತೆಯಲ್ಲಿ ಮಾದಕವಸ್ತು ದುರ್ಬಳಕೆಯ ಅಪಾಯಗಳು ಮತ್ತು ಪರಿಣಾಮಗಳ ಕುರಿತು ಜಾಗೃತಿ ಮೂಡಿಸಲಾಗುತ್ತಿದೆ. ಈ ಕಾರ್ಯಕ್ರಮದ ಮೂಲಕ ಮಾದಕವಸ್ತುಗಳ ದಾಸರಾಗಿರುವ  ವ್ಯಕ್ತಿಗಳು, ಕುಟುಂಬಗಳು ಮತ್ತು ಸಮುದಾಯಗಳ ಮೇಲೆ ಬೀರುವ ಹಾನಿಕಾರಕ ಪರಿಣಾಮಗಳ ಕುರಿತು ಜನಸಾಮಾನ್ಯರಲ್ಲಿ ಬಲವಾದ ಮತ್ತು ಏಕಮತದ ಸಂದೇಶ ಹರಡುವ ಉದ್ದೇಶ ಹೊಂದಲಾಗಿದೆ ಎಂದರು.



ಆರೋಗ್ಯಕರ ಹಾಗೂ ಸುರಕ್ಷಿತ ಸಮಾಜ ನಿರ್ಮಾಣದತ್ತ ಬದ್ಧತೆಯನ್ನು ಉತ್ತೇಜಿಸುವತ್ತ ಗುರಿಯಿಟ್ಟಿದೆ. ಮಹತ್ತರವಾದ ಅಭಿಯಾನದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಬೇಕು. ವಾಕಥಾನ್‌ ಗೆ ಉಪ ಪೊಲೀಸ್ ಆಯುಕ್ತ ಲೋಕೇಶ್ ಬಿ. ಜಗಲಸರ್,  ಸಂಸದರಾದ ಡಾ. ಸಿ. ಎನ್. ಮಂಜುನಾಥ್, ತೇಜಸ್ವಿ ಸೂರ್ಯ, ಶಾಸಕರಾದ ಎಲ್. ಎ. ರವಿ ಸುಬ್ರಮಣ್ಯ ಚಾಲನೆ ನೀಡಲಿದ್ದಾರೆ ಎಂದರು.

ಅಲಯನ್ಸ್ ಕ್ಲಬ್ಸ್ ಇಂಟರ್‌ನ್ಯಾಷನಲ್ ಬೆಂಗಳೂರು ಜಿಲ್ಲಾ ರಾಜ್ಯಪಾಲರಾದ ಸತ್ಯವತಿ ಬಸವರಾಜ್, ಅಲಯನ್ಸ್ ಕ್ಲಬ್ ಆಫ್ ಬೆಂಗಳೂರು ಕಿಂಗ್ಸ್ ಅಧ್ಯಕ್ಷ ವಿಜಯೇಂದ್ರ,  ಕಾರ್ಯದರ್ಶಿ ಧೀರಜ್, ಖಜಾಂಚಿ ನಿಶಾಂತ್ ಹಾಗೂ ವೃದ್ಧಿ ವೆಂಚರ್ಸ್ ವ್ಯವಸ್ಥಾಪಕ ನಿರ್ದೇಶಕ ಅಜಯ್ ಗೌಡ ನೇತೃತ್ವದಲ್ಲಿ ಅಭಿಯಾನ ನಡೆಯಲಿದೆ ಎಂದರು. 

ಈ ಸಂದರ್ಭದಲ್ಲಿ ಪೊಲೀಸ್ ಇನ್ಸ್‌ಪೆಕ್ಟರ್ ಗಳಾದ ಸೂರ್ಯಪ್ರಸಾದ್ ಎಸ್, ಹನುಮಂತನಗರ ಪೊಲೀಸ್ ಠಾಣೆಯ ಸತೀಶ್ ಕುಮಾರ್,  ಗಿರಿನಗರ ಪೊಲೀಸ್ ಠಾಣೆಯ ಗಿರೀಶ್ ನಾಯಕ್ ರವರು, ಚೆನ್ನಮ್ಮಕೆರೆ ಅಚುಕಟ್ಟು ಪೊಲೀಸ್ ಠಾಣೆಯ ವಿನಯ್ ಎಚ್.ಎನ್, ಕೆ.ಜಿ.ನಗರ ಪೊಲೀಸ್ ಠಾಣೆ, ಜಿ. ಉದಯ್ ರವಿ, ಶಂಕರಪುರ ಪೊಲೀಸ್ ಠಾಣೆಯ ಧರ್ಮೇಂದ್ರ ಟಿ.ಎಂ, ವಿ. ವಿ. ಪುರಂ ಪೊಲೀಸ್ ಠಾಣೆಯ ಲಿಂಗಣ್ಣ ಗೌಡ ಪಾಟೀಲ್ ಮತ್ತಿತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ