ನಾಯಕನಹಟ್ಟಿ : ‘ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾದ ಉನ್ನತ ಅಧಿಕಾರಿಗಳಿಗೆ ಗಂಭೀರ ಶಿಕ್ಷೆಯಾಗಬೇಕು. ಇದರ ನೈತಿಕ ಹೊಣೆಹೊತ್ತು ದೇಶದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಬೇಕು’ ಎಂದು ಕೆಪಿಸಿಸಿ ಮಾಧ್ಯಮ ವಕ್ತರ ಬಾಲಕೃಷ್ಣ ಸ್ವಾಮಿ ಯಾದವ್ ಆಗ್ರಹಿಸಿದ್ದಾರೆ
ನಂತರ ಮಾತನಾಡಿದ ಅವರು, ‘ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಸುಮಾರು 23 ಲಕ್ಷ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ದಾಳಿಯಾಗಿದೆ. ಎನ್ಟಿಎ ಸಂಸ್ಥೆ ವಿದ್ಯಾರ್ಥಿಗಳ ಜೊತೆ ಚೆಲ್ಲಾಟವಾಡುತ್ತಿರುವುದು ಹೊಸದೇನಲ್ಲ. 2024ರಲ್ಲಿಯೂ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿ ಪರೀಕ್ಷೆ ರದ್ದು ಮಾಡಲಾಗಿತ್ತು’ ಎಂದರು.
‘ಎನ್ಟಿಎ ಹಾಗೂ ಶಿಕ್ಷಣ ಸಚಿವರು ಯಾರೂ ಸಹ ಇದರ ಹೊಣೆಹೊರುತ್ತಿಲ್ಲ. ಇವರ ಅಧಿಕಾರದ ಹಪಾಹಪಿಗೆ ದೇಶದ ಬಡಜನರ ಮಕ್ಕಳು ಬಲಿಯಾಗುತ್ತಿದ್ದಾರೆ. ಕೋಟಾದಂತಹ ಜಾಗಗಳಲ್ಲಿ ನರಕಯಾತನೆ ಅನುಭವಿಸುತ್ತಿರುವ ಮಕ್ಕಳು ಮಾನಸಿಕ ಒತ್ತಡಕ್ಕೆ ಒಳಗಾಗಿ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಇದು ಆತ್ಮಹತ್ಯೆಯಲ್ಲ, ವ್ಯವಸ್ಥೆ ಹಾಗೂ ಸರ್ಕಾರ ಮಾಡುತ್ತಿರುವ ಸಾಂಸ್ಕೃತಿಕ ಕೊಲೆಗಳು. ವಿದ್ಯಾರ್ಥಿಗಳ ಬದುಕು ಬೀದಿಗೆ ತಂದ ದೇಶದ ವೈದ್ಯಕೀಯ ಶಿಕ್ಷಣದ ಪಾವಿತ್ರ್ಯವನ್ನು ಮಣ್ಣುಪಾಲು ಮಾಡಿದ ಎನ್ಟಿಎ ರದ್ದುಗೊಳಿಸಬೇಕು’ ಎಂದು ಆಗ್ರಹಿಸಿದರು
ವಿದ್ಯಾರ್ಥಿಗಳ ಮೇಲೆ ಹಲ್ಲೆ ಮಾಡಿರುವುದು ಖಂಡನೀಯ ಎಂದು ಕೇಂದ್ರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು