LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಶಿರಸಿಯಲ್ಲಿ ಕೆ ಆರ್ ಎಸ್ ಪಕ್ಷದ ಲಂಚಮುಕ್ತ ಅಭಿಯಾನ

ಶಿರಸಿ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಉತ್ತರಕನ್ನಡ ಜಿಲ್ಲಾ ಘಟಕದ ವತಿಯಿಂದ ಶಿರಸಿ ತಾಲೂಕಿನಲ್ಲಿ ವಿವಿಧ ಸರ್ಕಾರಿ ಕಚೇರಿಗಳಿಗೆ ಭೇಟಿ ಮಾಡಿ ಸರ್ಕಾರದ ನೀತಿ-ನಿಯಮಗಳು,ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ, ಸರಿಯಾದ ಸಮಯಕ್ಕೆ ಹಾಗೂ ತಲುಪುತ್ತಿದೆಯ ಹಾಗೂ ಸರ್ಕಾರಿ ಅಧಿಕಾರಿಗಳು ಯಾವ ರೂಪದಲ್ಲಿ ಸೇವೆ ನೀಡುತ್ತಿದ್ದಾರೆ ಎನ್ನುವುದರ ಕುರಿತು ಮಾಹಿತಿ ಪಡೆಯುವ ಲಂಚಮುಕ್ತ ಅಭಿಯಾನ ಆಯೋಜಿಸಲಾಗಿತ್ತು.



ಸರ್ಕಾರಿ ಆಸ್ಪತ್ರೆ,ಲೋಕೋಪಯೋಗಿ ಇಲಾಖೆ,ತಹಶೀಲ್ದಾರ್ ಕಚೇರಿ,ನಗರಸಭೆ ಗೆ ಭೇಟಿ ಮಾಡಿ ತಾಲೂಕಿನ ಸಾಮಾಜಿಕ ಸಮಸ್ಯೆಗಳ ಕುರಿತು ಅಧಿಕಾರಿಗಳ ಜೊತೆ ಚರ್ಚೆ ನಡೆಸಿ ಸಮಸ್ಯೆಗಳ ಪರಿಹಾರಕ್ಕಾಗಿ ಪಕ್ಷದ ವತಿಯಿಂದ ಒತ್ತಾಯಿಸಲಾಯಿತು.

 

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಶ್ರೀಮತಿ ರಂಜಿನಿ ಅವರು ಮಾತನಾಡಿ ಈಗಾಗಲೇ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷವು ರಾಜ್ಯಾದ್ಯಂತ ಲಂಚಮುಕ್ತ, ಬ್ರಷ್ಟಚಾರ ಮುಕ್ತ ಅಭಿಯಾನಗಳನ್ನು ಹಮ್ಮಿಕೊಂಡಿದ್ದು ಜಿಲ್ಲೆಯ,ತಾಲೂಕಿನ ಅಭಿವೃದ್ಧಿಗಾಗಿ ಪಕ್ಷವು ಜನಪರವಾದ ಹೋರಾಟ ಮತ್ತು ಅಭಿಯಾನಗಳನ್ನು ಹಮ್ಮಿಕೊಂಡಿದ್ದು ಜಿಲ್ಲೆಯಲ್ಲಿ ಮುಂದಿನ ಎಲ್ಲಾ ಹಂತದ ಚುನಾವಣೆಗಳಲ್ಲಿ ಸ್ಪರ್ಧಿಸಿ ಯುವಕರಿಗೆ,ಬದಲಾವಣೆ ಬಯಸುವ ಎಲ್ಲರಿಗೂ ಪಕ್ಷವು ವಿವಿಧ ಜವಾಬ್ದಾರಿಗಳನ್ನು ನೀಡಿ ನಾಯಕರನ್ನಾಗಿ ರೂಪಿಸಲಾಗುತ್ತಿದೆ.ಹಾಗೂ ಶಿರಸಿ ತಾಲೂಕಿನಲ್ಲಿ ಹಲವಾರು ಕಚೇರಿಗಳಲ್ಲಿ ಜನ ಸಾಮಾನ್ಯರಿಗೆ ಬಿಜೆಪಿ,ಕಾಂಗ್ರೆಸ್ , ಜೆಡಿಎಸ್ ಪಕ್ಷಗಳು ಸರ್ಕಾರದ ಯೋಜನೆಗಳನ್ನು ತಲುಪಿಸುವಲ್ಲಿ ವಿಫಲವಾಗಿ ಕುಟುಂಬ ರಾಜಕಾರಣದಲ್ಲಿ ತೊಡಗಿವೆ ಇದನ್ನು ಬದಲಾಯಿಸಲು ಕೆ ಆರ್ ಎಸ್ ಪಕ್ಷವು ಜಿಲ್ಲಾದ್ಯಂತ ಹಲವಾರು ಕಾರ್ಯಕ್ರಮಗಳನ್ನು,ಅಭಿಯಾನಗಳನ್ನು ಹಮ್ಮಿಕೊಳ್ಳಲಿದೆ ಎಂದು ತಿಳಿಸಿದರು.



ಇದೇ ಸಂದರ್ಭದಲ್ಲಿ ರಾಜ್ಯ ರೈತ ಘಟಕದ ಕಾರ್ಯದರ್ಶಿ ನಿರುಪಾದಿ ಕೆ ಗೋಮರ್ಸಿ,ಜಿಲ್ಲಾಧ್ಯಕ್ಷ ವಿನಾಯಕ ನಾಯಕ್,ನೀಲಕಂಠ ಕೆ ಎನ್,ವೆಂಕಟೇಶ್ ವೈದ್ಯ, ಪ್ರದೀಪ್, ರಮೇಶ್ ನಾಯಕ ,ಗಣಪತಿ ನಾಯ್ಕ್,ಸೀತಾರಾಮ ಗೌಡ,ರಮೇಶ್ ನಾಯಕ, ರವಿ ಹೊಸಕಟ್ಟೆ,ಮಂಜುನಾಥ್,ಸೇರಿದಂತೆ ಅನೇಕರು ಭಾಗವಹಿಸಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ