LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bangalore

ಸಂಸ್ಕೃತಿಯೇ ಭಾರತದ ಆತ್ಮ: ವಿನಾಯಕ ಭಟ್ ಮುರೂರು

ಬೆಂಗಳೂರು : ನಮ್ಮ  ಸಂಸ್ಕೃತಿಯೇ ಭಾರತದ ಆತ್ಮ ಎಂದು ಹೊಸದಿಗಂತ ಪತ್ರಿಕೆಯ ಸಂಪಾದಕರಾದ ವಿನಾಯಕ ಭಟ್ ಮುರೂರು ಅಭಿಪ್ರಾಯಪಟ್ಟರು.

ಅವರು ನಗರದ ಮತ್ತಿಕೆರೆಯ ರಾಯಲ್ ಕಾಲೇಜಿನ ಸ್ವಾತಂತ್ರ್ಯೋತ್ಸವ ಸಮಾರಂಭ ಮತ್ತು ಸಂಕಲ್ಪ ಅಭಿಯಾನದ ಮಹಾ ಸಮರ್ಪಣಾ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡುತ್ತಾ ಉಚಿತವಾಗಿ ಸಿಗುವ ಯಾವುದಕ್ಕೂ ಬೆಲೆ ಇರಲಾರದು, ನಾಗರಿಕರು ಸರ್ಕಾರದ ಯೋಜನೆಯ ದುರುಪಯೋಗ ಮಾಡಿಕೊಳ್ಳದೆ ಸದ್ಬಳಕೆ ಮಾಡಬೇಕು,ಹಿಂದಿನ ಹೋರಾಟದ ಸ್ಮರಣೆಯ ಜೊತೆ ಭವಿಷ್ಯದ ಭಾರತದ ಕುರಿತು ಯೋಚಿಸಬೇಕು, ಭಾರತದ ಗಡಿಯನ್ನು ಸೈನಿಕರು ಕಾಯುವಂತೆ ಭಾರತದ ಒಳಗಿನ ಸಮಸ್ಯೆಯನ್ನು ನಾವೇ ಪರಿಹರಿಸಿಕೊಳ್ಳಬೇಕು ಎಂದರು. ಧ್ವಜಾರೋಹಣ ನೆರವೇರಿಸಿದ ಭಾರತೀಯ ಸೈನ್ಯದ ನಿವೃತ್ತ ಯೋಧ ರಾಜೇಶ್ ಡಿ ಅವರನ್ನು ಸನ್ಮಾನಿಸಲಾಯಿತು. ರಾಯಲ್ ಕಾಲೇಜಿನ ವಿದ್ಯಾರ್ಥಿಗಳು ಕಳೆದ ಒಂದು ತಿಂಗಳುಗಳ ಕಾಲ ಸುಮಾರು ೧೦ ಸಾವಿರ ಮನೆಗಳಿಗೆ ತೆರಳಿ ಮಾದಕ ವ್ಯಸನಗಳ ಕುರಿತು ಮತ್ತು ಪರಿಸರ ಸಂರಕ್ಷಣೆಯ ಕುರಿತು ನಡೆಸಿದ ಸಂಕಲ್ಪ ಅಭಿಯಾನದ ಮಹಾ ಸಮರ್ಪಣೆಯನ್ನು ವಿದ್ಯಾರ್ಥಿಗಳು ಕೈಯಲ್ಲಿ ದೀಪ ಹಿಡಿದು ಪ್ರತಿಜ್ಞೆಮಾಡುವ ಮೂಲಕ ಸಂಪನ್ನಗೊಳಿಸಲಾಯಿತು. ಸಭೆಯ ಅಧ್ಯಕ್ಷತೆಯನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ.ದೇವರಾಜ್ ಬಿ.ಕೆ ವಹಿಸಿದ್ದರು. ನಿರ್ದೇಶಕಿ ಸುಜಾತ ದೇವರಾಜ್, ಟ್ರಸ್ಟಿ ಜೀವನ್ ಗೌಡ, ಪ್ರಾಚಾರ್ಯರಾದ ಡಾ.ಲಕ್ಷ್ಮೀಶ್ ಹೆಗಡೆ ಸೋಂದಾ ಉಪಸ್ಥಿತರಿದ್ದರು.ಸಭಾ ಕಾರ್ಯಕ್ರಮದ ನಂತರ ರಾಯಲ್ ಕಾಲೇಜಿನ ವಿದ್ಯಾರ್ಥಿಗಳಿಂದ ದೇಶಭಕ್ತಿ ಸಾರುವ ಕಾರ್ಯಕ್ರಮಗಳು ಸಂಭ್ರಮದಿಂದ ನಡೆದವು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ