LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Bangalore | State News

ಸರ್ಕಾರಿ ಜಮೀನು ಒತ್ತುವರಿ ತೆರವಿಗೆ ಆಗ್ರಹಿಸಿ ಡಿಸಿಎಂ ಜಿ. ಪರಮೇಶ್ವರ್ ಅವರಿಗೆ ಮನವಿ

ಬೆಂಗಳೂರು:  ಆರ್ಟ್ ಆಫ್ ಲಿವಿಂಗ್ ಸಂಸ್ಥೆಯು ಕೆರೆ, ಗೋಮಾಳ, ಸರ್ಕಾರಿ ಜಮೀನು ಹಾಗೂ ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದೆ. ಕೂಡಲೇ ಸರ್ಕಾರ ಆ ಜಮೀನುಗಳನ್ನು ವಶಪಡಿಸಿಕೊಳ್ಳಬೇಕು. ಅಲ್ಲದೆ, ದಲಿತ ಮಹಿಳೆ ರಂಗಮ್ಮನವರಿಗೆ ಸೇರಿದ 2 ಎಕರೆ ಜಾಗವನ್ನು ಮರಳಿ ಅವರ ಸ್ವಾಧೀನಕ್ಕೆ ನೀಡಬೇಕು ಎಂದು ಆಗ್ರಹಿಸಿ 'ರಾಷ್ಟ್ರೀಯ ಅಂಬೇಡ್ಕರ್ ಸೇನೆ' ಹಾಗೂ ಸಮತಾ ಸೈನಿಕ ದಳದ ವತಿಯಿಂದ ಸೋಮವಾರ ಬೃಹತ್ ಪಾದಯಾತ್ರೆ ಹಾಗೂ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು.

 

ಪ್ರತಿಭಟನೆಯ ನಂತರ, ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ರಾಜ್ಯಾಧ್ಯಕ್ಷರಾದ ಅರ್ಜುನ್ ಗೋಪಾಲಯ್ಯ ಹಾಗೂ ಸಮತಾ ಸೈನಿಕ ದಳದ ಯುವ ಘಟಕದ ಅಧ್ಯಕ್ಷರಾದ ಚಳುವಳಿ ನಾಗೇಶ್ ನೇತೃತ್ವದ ನಿಯೋಗವು ವಿಧಾನಸೌಧದಲ್ಲಿ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿಗಳು ಹಾಗೂ ಕಂದಾಯ ಸಚಿವರಾದ ಡಾ. ಜಿ. ಪರಮೇಶ್ವರ್ ಅವರನ್ನು ಭೇಟಿ ಮಾಡಿ, ಈ ಕುರಿತು ಸಂಪೂರ್ಣ ವಿವರಗಳನ್ನೊಳಗೊಂಡ ಮನವಿ ಪತ್ರವನ್ನು ಸಲ್ಲಿಸಿದೆ.

 

ಡಿಸಿಎಂ ಜಿ. ಪರಮೇಶ್ವರ್ ಅವರ ಭರವಸೆ: ನಿಯೋಗದ ಮನವಿಯನ್ನು ಸ್ವೀಕರಿಸಿ ಮಾತನಾಡಿದ ಡಿಸಿಎಂ ಡಾ. ಜಿ. ಪರಮೇಶ್ವರ್ ಅವರು, "ಆರ್ಟ್ ಆಫ್ ಲಿವಿಂಗ್ ಸಂಸ್ಥೆಯವರು ಮಾನ್ಯ ಉಚ್ಚ ನ್ಯಾಯಾಲಯದಿಂದ ಮಧ್ಯಂತರ ತಡೆಯಾಜ್ಞೆ ತಂದಿದ್ದಾರೆ. ಈ ರೀತಿಯ ಪ್ರಕರಣಗಳನ್ನು ಬಗೆಹರಿಸಲು ಹಾಗೂ ಸರ್ಕಾರಿ ಜಮೀನುಗಳನ್ನು ರಕ್ಷಿಸಲು ವಿಶೇಷ ತಿದ್ದುಪಡಿ ಮಸೂದೆಯನ್ನು ತಯಾರಿಸಲಾಗುತ್ತಿದೆ. ಮುಂಬರುವ ಸದನದಲ್ಲಿ ಅದನ್ನು ಜಾರಿಗೆ ತರಲಾಗುವುದು" ಎಂದು ಭರವಸೆ ನೀಡಿದರು.

 

ಇದೇ ನಿಯೋಗದಲ್ಲಿ  ಅಂಬೇಡ್ಕರ್ ಸೇನೆ ಮತ್ತು ವಿವಿಧ ದಲಿತ ಪರ ಸಂಘಟನೆಗಳ ಪ್ರಮುಖರು ಇದ್ದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
“ಅಮೋಘ” ಚಲನಚಿತ್ರದ ಹಾಡು ಬಿಡುಗಡೆಬಳ್ಳಾರಿ ಜಿಲ್ಲೆಯ ಎಸ್ಐಆರ್ ಕರಡು ಮತದಾರರ ಪಟ್ಟಿ ಪ್ರಕಟನಾಯಕನಹಟ್ಟಿ ತಿಪ್ಪೇರುದ್ರ ಸ್ವಾಮಿಗಳ ದರ್ಶನ ಪಡೆದ ಮಾಜಿ ಶಾಸಕ ಸುರೇಶ್ ಬಾಬುಅಂಬೇಡ್ಕರ್ ಕೇವಲ ವ್ಯಕ್ತಿಯಲ್ಲ, ಅದೊಂದು ವಿಚಾರಧಾರೆ: ಪ್ರೊ. ಎನ್.ಎಂ. ಸಾಲಿಸಾಂಸಾರಿಕ ಜೀವನ ಪ್ರವೇಶಿಸಿದ ಸ್ಪೈಡರ್ ಮ್ಯಾನ್ನಾಗೇಂದ್ರಗೆ ಮತ್ತೊಂದು ಮಹತ್ವದ ಹೊಣೆ: ಕಲ್ಯಾಣ ಕರ್ನಾಟಕ ಸಚಿವಾಲಯದ ಜವಾಬ್ದಾರಿಸಂಸ್ಕೃತ ವಿಶ್ವವ್ಯಾಪಿ ಜ್ಞಾನಭಾಷೆ, ಸಂಶೋಧನೆಗೆ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿ ತೋರಲಿಕಲ್ಲೂರು- ಶಿಶು ಪಾಲನಾ ಕೇಂದ್ರದಲ್ಲಿ ತಾಯಂದಿರಿಗೆ ಜಾಗೃತಿ. ಹೊನ್ನಳ್ಳಿ ತಾಂಡಾದಲ್ಲಿ ಶ್ರೀಗುರು ಅಜ್ಜಯ್ಯನ ದ್ವಿತೀಯ ದಶಮಾನೋತ್ಸವ ವಿಶೇಷ ಪೂಜಾ ಕಾರ್ಯಕ್ರಮಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ