LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕಾರ್ಖಾನೆ ಭಾದಿತ ರೈತ ಸಂಘ ಕಟ್ಟಲು ನಿರ್ಧಾರ

ಕೊಪ್ಪಳ: ನಗರಸಭೆ ಮುಂದೆ ನಡೆದಿರುವ ಬಲ್ಡೋಟ ಹಟಾವೋ ಕೊಪ್ಪಳ ಬಚಾವೋ 147ನೇ ದಿನದ ಧರಣಿ ಯಶಸ್ವಿಯಾಯಿತು.

ಧರಣಿಯಲ್ಲಿ ಕಾರ್ಯಕಾರಿ ಮಂಡಳಿಯಲ್ಲಿ ಚರ್ಚೆ ನಡೆಸಿ 20ಕ್ಕೂ ಹೆಚ್ಚು ಹಳ್ಳಿಗಳಲ್ಲಿ ಕಾರ್ಖಾನೆ ಭಾದಿತ ರೈತರನ್ನು ಸಂಘಟಿಸಬೇಕು ಎಂದಾಯಿತು. ಸುದೀರ್ಘ ಕಾಲದಿಂದ ಮಾಲಿನ್ಯ ಮಾಡುತ್ತಾ ಬರುವ ಕಾರ್ಖಾನೆಗಳಿಗೆ ಯಾವುದೆ ಕಾರಣಕ್ಕೂ ಮುಂದುವರಿದ ತಂತ್ರಜ್ಞಾನ ಅಳವಡಿಸಿರಿ ಎಂದು ಯಾವ ಪಕ್ಷವೂ ಹೇಳಬಾರದು. ಯಾಕೆಂದರೆ ಎರಡು ದಶಕಗಳಿಂದ ಹಳ್ಳಿ ಜನರ ಜೀವ ಈ ಕಾರ್ಖಾನೆಗಳು ಹಿಂಡಿವೆ. ಕೆಂಪು ವಲಯ ಪಟ್ಟಿಯ ಕಾರ್ಖಾನೆಗಳು ಎಂದು ಗೊತ್ತಿದ್ದೂ ಸುಧಾರಿತ ತಂತ್ರಜ್ಞಾನದ ಕೊರತೆ ಎಂದು ಹೇಳಬಾರದೆಂದು ಬಹಿರಂಗ ಸಭೆಯಲ್ಲಿ ಚರ್ಚಿಸಲಾಯಿತು.ಹಳ್ಳಿಗಳಲ್ಲಿ ಮುಖ್ಯವಾಗಿ ಗಿಣಿಗೇರಿ, ಕನಕಾಪುರ, ಬೇವಿನಹಳ್ಳಿ, ಅಲ್ಲಾನಗರ, ಹಿರೇಬಗನಾಳ, ಕಾಸನಕಂಡಿ, ಚಿಕ್ಕಬಗನಾಳ, ಲಾಚನಕೇರಿ, ಕುಣಿಕೇರಿ, ಮುಂಡರಗಿ, ಕುಣಿಕೇರಿ ತಾಂಡಾ, ಹಾಲವರ್ತಿ ಮುಂತಾದ 20ಕ್ಕೂ ಹೆಚ್ಚಿನ ಹಳ್ಳಿಯಲ್ಲಿ 'ಕೊಪ್ಪಳ ಕಾರ್ಖಾನೆ ಬಾಧಿತ ರೈತ ಸಂಘ' ವನ್ನು ಜಂಟಿ ಕ್ರಿಯಾ ವೇದಿಕೆಯ ನಿರ್ದೇಶನದಲ್ಲಿ ಕಟ್ಟಲು ನಿರ್ಣಯ ಕೈಗೊಳ್ಳಲಾಯಿತು.

ಇದಕ್ಕೆ ಬಾಧಿತವಾಗುವ ಹಳ್ಳಿಗಳು ಸ್ವಯಂಪ್ರೇರಣೆಯಿಂದ ಮುಂದೆ ಬಂದು ಘಟಕ ಕಟ್ಟಿಕೊಳ್ಳಬೇಕು ಎಂದು ವೇದಿಕೆಯಿಂದ ವಿನಂತಿ ಮಾಡಲಾಯಿತು.

ಧರಣಿಯಲ್ಲಿ ಪ್ರಧಾನ ಸಂಚಾಲಕ ಅಲ್ಲಮಪ್ರಭು ಬೆಟ್ಟದೂರು, ಮಹಿಳಾ ನಾಯಕಿ ಕಾವ್ಯಾ ಗಡಾದ, ಸರೋಜಾ ಬಾಕಳೆ, ವಿದ್ಯಾ ನಾಲ್ವಾಡ, ಸಂಗಮೇಶ್ವರ ಪಾಟೀಲ್, ಸಂಚಾಲಕರಾದ ಮಲ್ಲಿಕಾರ್ಜುನ ಬಿ‌. ಗೋನಾಳ, ಮಂಜುನಾಥ ಜಿ‌. ಗೊಂಡಬಾಳ, ನಿವೃತ್ತ ಪ್ರಾಚಾರ್ಯ ಬಿ.ಜಿ.ಕರಿಗಾರ, ಡಾ‌.ವೈ.ಬಿ. ರಡ್ಡೇರ, ಡಾ. ಬಸವರಾಜ ಪೂಜಾರ, ಶಂಭುಲಿಂಗಪ್ಪ ಹರಗೇರಿ, ಮಹೇಶ ಮನ್ನಾಪುರ, ರವಿ ಕಾಂತನವರ, ಎಸ್.ಬಿ. ರಾಜೂರು, ರಾಜಶೇಖರ ಏಳುಬಾವಿ, ಶರಣು ಶೆಟ್ಟರ್, ಯಮನೂರಪ್ಪ ಹಾಲಳ್ಳಿ ಬಸಾಪುರ, ಮುತ್ತುರಾಜ್ ತೋಟದ, ಮಹಾದೇವಪ್ಪ ಮಾವಿನಮಡು, ನಾಗರಾಜ ಕುಷ್ಟಗಿ ಲಾಚನಕೇರಿ, ಶಿವಪ್ಪ ಜಲ್ಲಿ, ವಿಜಯ ಮಹಾಂತೇಶ ಹಟ್ಟಿ, ಭೀಮಪ್ಪ ಯಲಬುರ್ಗಾ ಮುಂತಾದವರು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ