LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ವಾಸವಿ ಯುವಜನ ಸಂಘದಿಂದ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳ ವಿತರಣೆ

ಬೆಂಗಳೂರು : ಪರಿಸರ ಸ್ನೇಹಿ ಹಬ್ಬ ಆಚರಿಸುವ ರಾಜ್ಯ ಸರ್ಕಾರದ ಕೆರೆಗೆ ಓಗೊಟ್ಟಿರುವ ಶ್ರೀ ವಾಸವಿ ಯುವಜನ ಸಂಘ ಜನ ಸಾಮಾನ್ಯರಿಗೆ ಮಣ್ಣಿನ ಗೌರಿ, ಗಣಪತಿ ಮೂರ್ತಿಗಳನ್ನು ವಿತರಿಸಿತು. “ಪ್ರಕೃತಿಯನ್ನು ಉಳಿಸಿ – ಪರಿಸರ ಸ್ನೇಹಿ ಗಣೇಶ ಚತುರ್ಥಿ ಆಚರಿಸಿ” ಎಂಬ ಘೋಷವಾಕ್ಯ ಮೊಳಗಿಸಿದೆ.

ನಗರದ ಸಸ್ಯಕಾಶಿ ಲಾಲ್ಬಾಗ್ ಪಶ್ಚಿಮ ದ್ವಾರದ ಮುಂದೆ ಶ್ರೀ ವಾಸವಿ ಯುವಜನ ಸಂಘ ಸದಸ್ಯರು 9ನೇ ವರ್ಷವೂ ಮಣ್ಣಿನ ಮೂರ್ತಿಗಳನ್ನು ಗಣಪತಿಯನ್ನು ವಿತರಿಸಿದರು.



ಬೆಳ್ಳಂಬೆಳಿಗ್ಗೆ ವಾಯು ವಿಹಾರಕ್ಕೆ ಬಂದವರಿಗೆ 500 ಮಣ್ಣಿನ ಗಣೇಶ ಮತ್ತು ಗೌರಿ ಮೂರ್ತಿಗಳನ್ನು ವಿತರಿಸಿದರು. ಪ್ರಕೃತಿಗೆ ಹಾನಿಕಾರಕವಾದ ರಾಸಾಯನಿಕ ಬಣ್ಣಗಳಿಂದ ಮಾಡಿದ ಪ್ಲ್ಯಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ಖರೀದಿಯನ್ನು ನಿಲ್ಲಿಸಬೇಕು. ಸರ್ಕಾರದ ಆದೇಶಕ್ಕೆ ಮನ್ನಣೆ ನೀಡಿ ಮಣ್ಣಿನಿಂದ ಮಾಡಿದ ದೀಪಗಳನ್ನೇ ಬಳಸಬೇಕು ಎಂದು ಜನ ಸಾಮಾನ್ಯರಿಗೆ ತಿಳಿವಳಿಕೆ ನೀಡಿದರು.

 

ಮುಖ್ಯ ಅತಿಥಿಗಳಾಗಿ ಆಗಮಿಸಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ ಅವರು  ರಚಿಸಿರುವ (ಅವರ 50ನೇ ಪುಸ್ತಕ) "ಮೋಸ್ಟ್ ಅಡೋರಬಲ್ ಮೋದಿಜಿ" ಎಂಬ ಶೀರ್ಷಿಕೆಯ ಪುಸ್ತಕವನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು.

 

ನಂತರ ಮಾತನಾಡಿದ ಸಿ.ಎ ಡಾ. ವಿಷ್ಣು ಭರತ್ ಆಲಂಪಲ್ಲಿ, ಪರಿಸರ ಸಂರಕ್ಷಣೆಗೆ ಪ್ರಧಾನಿ ನರೇಂದ್ರ ಮೋದಿ ನಮಗೆಲ್ಲರಿಗೂ ಮಾದರಿಯಾಗಿದ್ದಾರೆ. ನಾವೆಲ್ಲರೂ ಹಬ್ಬಗಳನ್ನು ಪರಿಸರ ಸ್ನೇಹಿಯಾಗಿಸಬೇಕು  ವಿವರಿಸಿದರು



ಈ ಸಂದರ್ಭದಲ್ಲಿ ಶ್ರೀ ವಾಸವಿ ಯುವಜನ ಸಂಘದ ಪದಾಧಿಕಾರಿಗಳಾದ ದ್ವಾರಕನಾಥ್, ಶಂಕರ್, ಶ್ರೀಧರ್, ಸಂಘದ ಅಧ್ಯಕ್ಷ ಗುರುಪ್ರಸಾದ್, ಮಾಜಿ ಅಧ್ಯಕ್ಷ ಮುರಳಿ ಕೃಷ್ಣ, ಪದಾಧಿಕಾರಿಗಳಾದ ಮಹೇಂದ್ರ ಕುಮಾರ್, ಬಾಲಾಜಿ ಸೇರಿ 40 ಕ್ಕೂ ಅಧಿಕ ಮಂದಿ ಜನ ಜಾಗೃತಿಯಲ್ಲಿ ಪಾಲ್ಗೊಂಡರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ