LIVE TV StateNationalPoliticsInternationalCrimeEntertainmentSportsEducationFINANCE & TAXATION
Districts Chitradurga | State News

ಸರ್ಕಾರದ ವಿರುದ್ಧ ಮಾಜಿ ಶಾಸಕ ತಿಪ್ಪೇಸ್ವಾಮಿ ಆಕ್ರೋಶ

ನಾಯಕನಹಟ್ಟಿ: ಮೊಳಕಾಲ್ಮೂರು, ಕೂಡ್ಲಿಗಿ, ಸಂಡೂರು, ಕ್ಷೇತ್ರಗಳಲ್ಲಿ ಮಳೆ ಇಲ್ಲದೆ ಬರ ಪರೀಸ್ಥಿತಿ ಎದುರಿಸುತ್ತಿದೆ ಆದರೆ ನೀವು ಯಾಕೆ ಬರಪೀಡಿತ ಪ್ರದೇಶವೆಂದು ಮೊದಲನೇ ಪಟ್ಟಿಯಲ್ಲಿ ಘೋಷಣೆ ಮಾಡಲಿಲ್ಲ ಎಂದು ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಶಾಸಕ ನೇರಲಗುಂಟೆ ಎಸ್.ತಿಪ್ಪೇಸ್ವಾಮಿ ಆಕ್ರೋಷವ್ಯಕ್ತಪಡಿಸಿದರು.

 

ನಾಯಕನಹಟ್ಟಿ ಪಟ್ಟಣದ ಶುಕ್ರವಾರ ಪತ್ರಿಕೆ ಗೋಷ್ಠಿಯಲ್ಲಿ ಮಾತನಾಡಿದ ಅವರು ಮೇಲಿನ 3 ಕ್ಷೇತ್ರಗಳಲ್ಲಿ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಜನರು ಹೆಚ್ಚಾಗಿ ವಾಸಿಸುತ್ತಿದ್ದಾರೆ. ಕೆಲಸ ಇಲ್ಲದೆ ಅನೇಕ ಜನರು ವಲಸೆ ಹೋಗುತ್ತಿದ್ದಾರೆ. ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡದ ಜನರು ಕಾಂಗ್ರೆಸ್ ಪಕ್ಷ ಅವರನ್ನು ದ್ರೋಹ ಎಸಗುತ್ತಿದ್ದಾರೆ. ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಮಂತ್ರಿಗಳೇ ಭಧ್ರಾ ಮೇಲ್ದಂಡೆ ಯೋಜನೆಗೆ ಹಣ ಮೀಸಲಿಡಿ ಹಾಗೂ ಎಲ್ಲಾ ಕೆರೆಗಳಿಗೆ ನೀರು ತರುವಂತಹ ಕೆಲಸ ಮಾಡಿ ಗೋ-ಶಾಲೆ ತೆರೆಯಿರಿ ಮೇವು ಕೊಡುವಂತಹ ಕೆಲಸ ಮಾಡಿ ಎಂದು ತಿಳಿಸಿದರು.

 

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರ ಅತ್ಯಂತ ಹಿಂದುಳಿದ0ತಹ ಕ್ಷೇತ್ರ ರೈತರು ತೀವ್ರ ಸಂಕಷ್ಠಕ್ಕೆ ಸಿಲುಕಿದ್ದಾರೆ. ಸಾಲ ಮಾಡಿ ಬಿತ್ತನೆ ಮಾಡಿದ್ದಾರೆ ರೈತರ ಆರ್ಥಿಕ ಪರೀಸ್ಥಿತಿ ಎದುರಾಗಿದೆ. ಬೆಳೆ ಕೈಗೆ ಸಿಗುವುದು ಅನುಮಾನವಾಗಿದೆ. ಅಂತಹ ಮೊಳಕಾಲ್ಮೂರು ಕ್ಷೇತ್ರವನ್ನು ಬರಪೀಡಿತ ಪ್ರದೇಶ ಎಂದು ಪರಿಗಣಿಸಿದೇ ಸರ್ಕಾರ ನಿರ್ಲಕ್ಷ ವಹಿಸಿದೆ. ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣ ರಾಜ್ಯದಲ್ಲಿ ನಿಮ್ಮ ಸರ್ಕಾರ ಇದೆಯಲ್ಲಾ ಯಾಕೆ ಮೊಳಕಾಲ್ಮೂರು ಕ್ಷೇತ್ರ ಬರಪೀಡಿತ ಪ್ರದೇಶವೆಂದು ಘೋಷಿಸಿಲ್ಲ ಎಂದು ಪ್ರಶ್ನಿಸಿದರು. ಮೊಳಕಾಲ್ಮೂರು, ಕೂಡ್ಲಿಗಿ, ಸಂಡೂರು, ಕ್ಷೇತ್ರಗಳಲ್ಲಿ ಸಾವಿರಾರು ಎಕರೆ ಪ್ರದೇಶಗಳಲ್ಲಿ ಬೆಳೆ ಒಣಗಿ ರೈತರು ಸಂಕಷ್ಟಕ್ಕೆ ಸಿಲುಕಿದರು ರಾಜ್ಯ ಸರ್ಕಾರ ಘೋಷಿಸಿರುವ ಬರಪೀಡಿತ ಪಟ್ಟಿಯಲ್ಲಿ ಯಾವುದೇ ಕ್ಷೇತ್ರಗಳನ್ನು ಸೇರ್ಪಡೆ ಮಾಡದಿರುವುದು ಖಂಡನೀಯ ಎಂದು ಆಕ್ರೋಷ ವ್ಯಕ್ತಪಡಿಸಿದರು. ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಿದರು ಆದರೆ ಬರಗಾಲ ಘೋಷಣೆ ಮಾಡುವ ಸಂದರ್ಭದಲ್ಲಿ ಕ್ಷೇತ್ರವನ್ನು ಕಡೆಗಣಿಸುವುದು ರೈತರಿಗೆ ಮಾಡಿರುವ ಅನ್ಯಾಯವಾಗಿದೆ. ಮೊಳಕಾಲ್ಮೂರು ಶಾಸಕ ಎನ್.ವೈ.ಗೋಪಾಲಕೃಷ್ಣರವರೆ ನೀವು ಕಾಂಗ್ರೆಸ್ ಪಕ್ಷಕ್ಕೆ ಒತ್ತಡ ಏರಿ ಬರಗಾಲ ಪ್ರದೇಶ ಎಂದು ಘೋಷಣೆ ಮಾಡಿಸಬೇಕೆಂದು ಹೇಳಿದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಿಜೆಪಿ ಬೃಹತ್ ಸಾರ್ವಜನಿಕ ಸಮಾವೇಶಕ್ಕೆ ಅನುಮತಿ : ಭರದ ಸಿದ್ದತೆವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ನಾರಾ ಭರತ್ ರೆಡ್ಡಿಸತತ ಪುನರ್ವಸತಿ ಮತ್ತು ಫಿಸಿಯೋಥೆರಪಿಯ ಮೂಲಕ ರೋಗಿ ಸಂಪೂರ್ಣ ಗುಣಮುಖಅಪಾಯಕ್ಕೆ ಆಹ್ವಾನ ನೀಡುತ್ತಿರುವ ವಿದ್ಯುತ್ ಇಲಾಖೆಯ ನಿರ್ಲಕ್ಷ್ಯ. ಕಾಡಿನ ಜ್ಞಾನ ನಾಡಿಗೆ ಹಂಚಿದ ಕಾಡಿನ ಸಂತ ತೇಜಸ್ವಿ: ಗೊರೂರು ಶಿವೇಶ್ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆ -2026 ಪಾದಯಾತ್ರೆ ಕೇವಲ ರಾಜಕೀಯ ಹೋರಾಟವಲ್ಲ; ಜನರ ಬದುಕಿನ ಪ್ರಶ್ನೆಗಳಿಗಾಗಿ ನಡೆಯುತ್ತಿರುವ ಜನಾಂದೋಲನ ವಿಜಯೇಂದ್ರ‘ಸಾಕ್ಷಿ ‘ ಕಿರುಚಿತ್ರ ಚಿತ್ರೀಕರಣ ಮುಕ್ತಾಯಮಲೆ ಮಾದೇಶ್ವರ ಬೆಟ್ಟದ ದೇವರ ದರ್ಶನ ಪಡೆದ ಅಂಬೇಡ್ಕರ್ ಅಭಿವೃದ್ದಿ ನಿಗಮದ ಅಧ್ಯಕ್ಷ ಸಿ. ನರೇಂದ್ರಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕರ ದಿನಾಚರಣೆ