LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಖಾಸಗಿ ಶಾಲೆಗಳ ಶುಲ್ಕವನ್ನು ನಾಮಫಲಕಗಳಲ್ಲಿ ಅಳವಡಿಸಲು ಒತ್ತಾಯ

ನಾಯಕನಹಟ್ಟಿ :  ಖಾಸಗಿ ಶಾಲೆಗಳ ಶುಲ್ಕವನ್ನು ನಾಮ ಫಲಕಗಳಲ್ಲಿ ಅಳವಡಿಸಬೇಕೆಂದು ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್ಕುಮಾರ್ ಶೆಟ್ಟಿ ಬಣ) ನಾಯಕನಹಟ್ಟಿ ಹೋಬಳಿ ಘಟಕದ ವತಿಯಿಂದ ಒತ್ತಾಯಿಸಿ ಚಳ್ಳಕೆರೆ ನಗರದ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಪತ್ರ ನೀಡಲಾಯಿತು.

 

ನಾಯಕನಹಟ್ಟಿ ಹೋಬಳಿಯಲ್ಲಿರುವ ಖಾಸಗಿ ಶಾಲೆಗಳ ಶುಲ್ಕವನ್ನು ನಾಮಫಲಕಗಳಲ್ಲಿ ಕಡ್ಡಾಯವಾಗಿ ಬಳಸಬೇಕು ಹಾಗೂ ಶಾಲೆಗಳಲ್ಲಿ ಕನ್ನಡ ಭಾಷೆಗೆ ಶೇಕಡ 60% ಮಾನ್ಯತೆ ನೀಡಬೇಕು. ನಾಯಕನಹಟ್ಟಿ ಹೋಬಳಿಯಲ್ಲಿ ಗ್ರಾಮೀಣ ಭಾಗದ ಜನರು ಹೆಚ್ಚಾಗಿ ನಾಯಕನಹಟ್ಟಿ ಪಟ್ಟಣದ ಖಾಸಗಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಲಾಗುತ್ತಿದ್ದು ಆದ್ದರಿಂದ ನಾಯಕನಹಟ್ಟಿ ಹೋಬಳಿಯ ಖಾಸಗಿ ಶಾಲೆಗಳ ಮುಖ್ಯಶಿಕ್ಷಕರುಗಳು ಎಲ್.ಕೆ.ಜಿ, ಯು.ಕೆ.ಜಿ ಇಂದ ಹಾಗೂ 1ನೇ ತರಗತಿಯಿಂದ 10ನೇ ತರಗತಿಯವರೆಗೂ ಆಯಾ ಶಾಲೆಗಳು ನೀವು ನಿಗಧಿ ಪಡಿಸಿದ ಶಾಲಾ ಶುಲ್ಕಗಳನ್ನು ನಾಮ ಫಲಕಗಳಲ್ಲಿ (ನೋಟೀಸ್ ಬೋರ್ಡ್) ಹಾಕಬೇಕು ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಸಿದರು.

 

ಹೋಬಳಿ ಅಧ್ಯಕ್ಷರು ಬೋರಯ್ಯ ಎನ್., ನಗರ ಘಟಕದ ಅಧ್ಯಕ್ಷರು ಉಮೇಶ್, ಪ್ರಧಾನಕಾರ್ಯದರ್ಶಿ ಸುರೇಶ್, ಉಸ್ತುವಾರಿ ಎಂ.ಓಂಕಾರಪ್ಪ, ಪಾಪಣ್ಣ, ಕಾಟಂಲಿಂಗಯ್ಯ, ಉಪಾಧ್ಯಕ್ಷ ಪಾಪಣ್ಣ, ಪ್ರದೀಪ್, ಕೇಶವ, ಎಂ.ಸಿ.ರಮೇಶ್, ಪಾಲಯ್ಯ ಹಾಗೂ ಸಂಘದ ಪದಾಧಿಕಾರಿಗಳು ಇದ್ದರು.

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ