ಚಿತ್ರದುರ್ಗ : ಜಿ. ಎಸ್. ಉಜ್ಜಿನಪ್ಪ ಅವರ ನಿಧನದ ಸುದ್ದಿ ನಿಜಕ್ಕೂ ಅತ್ಯಂತ ಬೇಸರ ಮತ್ತು ದುಃಖ ತರುವಂತಹ ಸಂಗತಿ. ಸಾಂಸ್ಕೃತಿಕ ಹಾಗೂ ಸಾಹಿತ್ಯಿಕ ಲೋಕಕ್ಕೆ ಇದು ತುಂಬಲಾರದ ನಷ್ಟ.
ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಗೌನಹಳ್ಳಿ ಗ್ರಾಮದವರಾದ ಅವರು ತಮ್ಮ ಬರವಣಿಗೆ, ಪತ್ರಿಕೋದ್ಯಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆ ಅಪಾರವಾದದ್ದು. ಬಸವಾದಿ ಶರಣರ ತತ್ವಗಳನ್ನು, ಆದರ್ಶಗಳನ್ನು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಅದನ್ನು ಇತರರಿಗೂ ಪಸರಿಸಿದ ಅವರ ನಿಸ್ವಾರ್ಥ ಸೇವೆ ಸದಾ ಸ್ಮರಣೀಯ.
ವಯೋಸಹಜ ಕಾಯಿಲೆಯಿಂದ ಶನಿವಾರ ಬೆ.6.10ಕ್ಕೆ ಚಿತ್ರದುರ್ಗದಲ್ಲಿ ನಿಧನರಾಗಿದ್ದಾರೆ.
ಅಂತ್ಯಕ್ರಿಯೆ ಗೌನಹಳ್ಳಿ ಗ್ರಾಮದಲ್ಲಿ ಭಾನುವಾರ ಬೆ.10 ರ ನಂತರ ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ.