LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಕೋಡಿಹಳ್ಳಿ ಗ್ರಾಮದಲ್ಲಿ 22 ನೇಯ ವರ್ಷದ ಅದ್ದೂರಿ ಗಣೇಶೋತ್ಸವ ಆಚರಣೆ

ನಾಯಕನಹಟ್ಟಿ : ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ತಳಕು ಹೋಬಳಿಯ ಕೋಡಿಹಳ್ಳಿ ಗ್ರಾಮದಲ್ಲಿ ಜೈ ಭೀಮ್ ಶ್ರೀ ಯುವ ವಿನಾಯಕ ಸಂಘ ಹಾಗೂ ಡಾ.ಬಿ.ಆರ್ ಅಂಬೇಡ್ಕರ್ ಯುವಕ ಸಂಘ ಇವರ ಸಹಯೋಗದೊಂದಿಗೆ ಈ ಬಾರಿ ದಲಿತ ಸಮುದಾಯದ ಶಕ್ತಿ ದೇವತೆಯಾದ ಶ್ರೀ ಶ್ರೀ ದುರ್ಗಾಂಬಿಕ ದೇವಸ್ಥಾನದ ಆವರಣದಲ್ಲಿ ಶ್ರೀ ಗೌರಿ ಗಣೇಶನನ್ನು ಪ್ರತಿಷ್ಟಾಪಿಸಿ ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಯಿತು.



‎ಪ್ರತಿ ದಿನ ಸಂಜೆ ಯುವಕ ಯುವತಿಯರು ಹಾಗೂ ಶಾಲಾ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಡ್ಯಾನ್ಸರ್ ಮೈಕಲ್ ವೆಂಕಿ ನಡೆಸಿಕೊಡುತ್ತಿದ್ದರು, ಅಲ್ಲದೆ ಪ್ರತಿ ದಿನವೂ ವಿವಿಧ ಕುಟುಂಬಗಳಿಂದ ವಿಶೇಷ ಪೂಜೆ ಹಾಗೂ ಪ್ರಸಾದ ವಿನಿಯೋಗ ಕಾರ್ಯಕ್ರಮ ಇರುತಿತ್ತು..

‎ಕೊನೆಯ ದಿನ ಇಡೀ ಸಮುದಾಯದ ಎಲ್ಲ ಜನತೆಗೆ ಶ್ರೀ ತಿಪ್ಪಯ್ಯ ಕೆ.ಪಿ.ಟಿ.ಸಿ.ಎಲ್. ಶ್ರೀಮತಿ ಚನ್ನಬಸಮ್ಮ ಕುಟುಂಬ ವರ್ಗದವರಿಂದ ಅನ್ನ ಸಂತರ್ಪಣೆ ನಡೆಯಿತು, ಸುಮಾರು 13 ಅಡಿ ಛತ್ರಪತಿ ಶಿವಾಜಿ  ಇರುವ ಶ್ರೀ ಗಣೇಶ ಮೂರ್ತಿಗೆ ವಿಶೇಷ ಪೂಜೆಯನ್ನು ಸಲ್ಲಿಸಿ ವಿಸರ್ಜನೆಗೆ ಚಾಲನೆ ನೀಡಲಾಯಿತು.



‎ಗ್ರಾಮದ ಎಲ್ಲ ರಾಜ ಬೀದಿಗಳಲ್ಲಿ ಹೆಜ್ಜೆ ಹಾಕುತ್ತಾ ನೂರಾರು ಯುವಕ ಯುವತಿಯರು ಹಿರಿಯರು ಕುಣಿದು ಕುಪ್ಪಳಿಸಿದರು ಮೆರವಣಿಗೆಯು ಅತ್ಯಂತ ವಿಜೃಂಭಣೆಯಿಂದ ಕೂಡಿತ್ತು,ಗ್ರಾಮದ ಜನರು ಗಣಪನಿಗೆ ವಿಶೇಷ ಪೂಜೆಯನ್ನು ಮಾಡಿಸಿದರು, ಸಾವಿರಾರು ಭಕ್ತರು ಗಣೇಶನ ಕೃಪೆಗೆ ಪಾತ್ರರಾದರು.

‎ಯಾವುದೇ ಅಹಿತಕರ ಘಟನೆಗಳು ನಡೆಯದೆ ಸುರಕ್ಷಿತವಾಗಿ ಗಣಪತಿಯನ್ನು ಪೂಜಿಸಿ ಹೂವಿನ ಹಾರಜು ಪ್ರಕ್ರಿಯೆ ಮುಗಿಸಿ ನಮ್ಮ ಗ್ರಾಮದ ಕೆರೆಯಲ್ಲಿ ಅತ್ಯಂತ ಭಕ್ತಿಪೂರ್ವಕವಾಗಿ ವಿಸರ್ಜನೆ ಮಾಡಲಾಯಿತು.



‎ಈ ಗೌರಿ ಗಣೇಶೋತ್ಸವ ವಿಸರ್ಜನಾ ಮೆರವಣಿಗೆಯಲ್ಲಿ ಸಣ್ಣ ನಾಗಯ್ಯ, ಎಂ.ಏಚ್ ತಿಪ್ಪೇಸ್ವಾಮಿ, ಮಲ್ಲಯ್ಯ, ,ಹನುಮಂತಪ್ಪ, ಪುಟ್ಟಣ್ಣ, ತಿಪ್ಪೇಸ್ವಾಮಿ, ಓಬಣ್ಣ, ದುರುಗಣ್ಣ, ನಿಂಗಣ್ಣ, ಕೊಲ್ಲಾರಪ್ಪ , ಲಿಂಗರಾಜು.ಡಿ, ಮಲ್ಲಿಕಾರ್ಜುನಯ್ಯ.ಟಿ, ವಿನಯ್ ಕುಮಾರ್.ಬಿ.ಎಂ, ಮಂಜುನಾಥ್, ರುದ್ರಮುನಿ.ಏಚ್, ಮೋಹನ್ .ಡಿ ನಂದೀಶ್. ಓ ಶ್ರೀಧರ್.ಏಚ್ ,ನಿಂಗರಾಜು.ಟಿ,  ರಾಜು.ಡಿ , ವಿಜಯ್ ಕುಮಾರ್.ಡಿ, ತಿಪ್ಪೇಸ್ವಾಮಿ.ಯು, ರಮೇಶ್.ಎಂ, ಶಿವಮೂರ್ತಿ.ಟಿ , ಗುರುಮೂರ್ತಿ, ಚಿದಾನಂದ್, ಉಪೇಂದ್ರ, ರವೀಶ್, ಮಲ್ಲಿಕಾರ್ಜುನ್.ಜಿ, ಅರುಣ್ ಕುಮಾರ್.ಟಿ, ದಯಾನಂದ.ಟಿ, ಡ್ಯಾನ್ಸ್ ಮಾಸ್ಟರ್ ವೆಂಕಟೇಶ್, ತಿಪ್ಪೇಶ್ , ಮನೋಜ್ ಕುಮಾರ್.ಟಿ, ಜಯಂತ್, ನಾಗೇಶ್, ಮಂಜು, ಕಿರಣ್, ಸ್ವಾಮಿ.ಆರ್, ಕೋಟೆಶ್, ಗೋಪಿನಾಥ್, ಮೈಲಾರಿ, ದುರುಗೇಶ್, ಅಭಿಷೇಕ್, ವಿಜಯ್.ಎಸ್, ಮಾರಣ್ಣ, ಶಿವಪ್ಪ, ಪರಶುರಾಮ್, ಕಣುಮೇಶ್ , ಮಹೇಶ್, ಕೊಲ್ಲಾರಿ,ಗಣೇಶ್, ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು,ಮತ್ತು ಸಮುದಾಯದ ಎಲ್ಲ ಮುಖಂಡರು, ಯಜಮಾನರು ಸಮಸ್ತ ಯುವಕ ಯುವತಿಯರು, ಸರ್ವ ಸದಸ್ಯರ ಸಹಕಾರದೊಂದಿಗೆ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಿದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ