ಬೆಂಗಳೂರು : ಬಿಡದಿ ಟೌನ್'ಶಿಪ್ ಯೋಜನೆಗೆ ಸಂಬಂಧಿಸಿದಂತೆ ಕೇಂದ್ರ ಸಚಿವರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಸಮಗ್ರವಾಗಿ ಚರ್ಚಿಸಲು ನಾನು ಸಿದ್ಧನಿದ್ದು, ದಿನಾಂಕ 26-06-2026, ಬೆಳಗ್ಗೆ 11 ಗಂಟೆಗೆ ತಮ್ಮ ಐವರು ಪ್ರತಿನಿಧಿಗಳೊಂದಿಗೆ ವಿಧಾನಸೌಧದ ನನ್ನ ಕಚೇರಿಗೆ ಆಗಮಿಸುವಂತೆ ಪತ್ರದ ಮೂಲಕ ಅಧಿಕೃತ ಆಹ್ವಾನ ನೀಡಿದ್ದೇನೆ ಎಂದು ಬಿಡಿದ ಟೌನ್ ಶಿಪ್ ಬಗ್ಗೆ ಪ್ರತಿಭಟನೆ ಮಾಡುತ್ತಿರುವ ಜೆಡಿಎಸ್ ನ ಮಾಜಿ ಸಿಎಂ ಹಾಗೂ ಕೇಂದ್ರ ಕೈಗಾರಿಕ ಸಚಿವರಿಗೆ ಸಿಎಂ ಡಿ.ಕೆ ಶಿವಕುಮಾರ್ ಸವಾಲ್ ಹಾಕಿದ್ದಾರೆ.

ಕುಮಾರಸ್ವಾಮಿ ಅವರೇ ಆರಂಭಿಸಿದ ಬಿಡದಿ ಟೌನ್'ಶಿಪ್ ಯೋಜನೆ ಕುರಿತು ಎಲ್ಲಾ ದಾಖಲೆಗಳು, ಸರ್ಕಾರದ ನಿರ್ಣಯಗಳು ಹಾಗೂ ವಾಸ್ತವಾಂಶಗಳ ಆಧಾರದ ಮೇಲೆ ಚರ್ಚಿಸಲು ನಾನು ಸದಾ ಸಿದ್ಧನಿದ್ದೇನೆ ಹಾಗಾಗಿ ಕುಮಾರಸ್ವಾಮಿ ಅವರನ್ನು ಆಹ್ವಾನಿಸಿದ್ದೇನೆ ಎಂದು ಡಿ.ಕೆ ಶಿವಕುಮಾರ್ ಅವರು ತಮ್ಮ ಫೇಸ್ ಬುಕ್ ಪೇಜ್ ಲ್ಲಿ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಸವಾಲ್ ಹಾಕಿ ಆಹ್ವಾನಿಸಿದ್ದಾರೆ.