ಬೆಂಗಳೂರು: ಸಮಾಜದ ಎಲೆಮರೆ ಕಾಯಿಯಂತಿರುವ ಸಾಧಕರನ್ನು ಗುರುತಿಸಿ ಗೌರವಿಸುವ ಕಾರ್ಯವನ್ನು ಹಲವು ವರ್ಷಗಳಿಂದ ನಿರಂತರವಾಗಿ ನಡೆಸಿಕೊಂಡು ಬರುತ್ತಿದ್ದೇವೆ. ನಮ್ಮ ಸೇವಾ ಚಟುವಟಿಕೆಗಳು ರಾಜ್ಯದ ಪ್ರತಿಯೊಂದು ಭಾಗಕ್ಕೂ ತಲುಪಬೇಕು ಹಾಗೂ ಇನ್ನಷ್ಟು ಜನರಿಗೆ ನೆರವಾಗುವ ಉದ್ದೇಶದಿಂದ ಕಾರ್ಯನಿರ್ವಹಿಸು ತ್ತಿದ್ದೇವೆ ಎಂದು ಓರಿಯೆಂಟಲ್ ಫೌಂಡೇಶನ್ ಸಂಸ್ಥಾಪಕ ರವಿಕುಮಾರ್ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಓರಿ ಯೆಂಟಲ್ ಫೌಂಡೇಶನ್ (ರಿ) ವತಿಯಿಂದ ಚಾಮ ರಾಜ ಪೇಟೆಯ ಕನ್ನಡ ಸಾಹಿತ್ಯ ಪರಿಷತ್ ಸಭಾಂಗಣದಲ್ಲಿ ನಡೆದ ಮಾನವ ರತ್ನ ಮತ್ತು ರಾಣಿ ಚೆನ್ನಮ್ಮ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು. ಸಮಾಜ, ಶಿಕ್ಷಣ, ಕಲೆ, ಸಾಹಿತ್ಯ, ಕೃಷಿ ಹಾಗೂ ವಿವಿಧ ಕ್ಷೇತ್ರಗಳಲ್ಲಿ ವಿಶಿಷ್ಟ ಸೇವೆ ಸಲ್ಲಿಸಿ ರುವ 90ಕ್ಕೂ ಹೆಚ್ಚು ಸಾಧಕರನ್ನು ಗೌರವಿಸಲಾಯಿತು.
ನಟ, ರಂಗಭೂಮಿ ಕಲಾವಿದ ಸುಚೇಂದ್ರ ಪ್ರಸಾದ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಕನ್ನಡ ನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಕನ್ನಡ ಭಾಷೆಯ ವೈಶಿಷ್ಟ್ಯವನ್ನು ವಿವರಿಸಿ, ಕನ್ನಡದ ಉಳಿವು ಮತ್ತು ಬೆಳವಣಿಗೆಗೆ ಪ್ರತಿಯೊ ಬ್ಬರೂ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.
ಈ ವೇಳೆ ಡಾ.ರೇವಣ್ಣ, ಗೋವಿಂದ ರಾಜು, ರಾಮಾಚಾರಿ, ಉತ್ಸವ ಚಂದ್ರಪ್ಪ, ನಾಗರಾಜು, ಡಾ.ಬರಿಣಿ ರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.