LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಗು ಏನಾದರೂ ವಸ್ತು ನುಂಗಿದರೆ ತಕ್ಷಣ ಆಸ್ಪತ್ರೆ ದಾಖಲಿಸಿರಿ

ಬೆಂಗಳೂರು: ತಮ್ಮ ಮಗು ಯಾವದೋ ಒಂದು ವಸ್ತುವನ್ನು ನುಂಗಿದ್ದರೆ, ಅಸ್ವಸ್ಥವಾಗುವ ಮುನ್ನ ನೇರವಾಗಿ ಆಸ್ಪತ್ರೆಗೆ ತೆರಳಿ ಮಗುವಿನ ಪ್ರಾಣಕ್ಕೆ ಕುತ್ತಾಗುವ ಸಂದರ್ಭವನ್ನು ಪೋಷಕರು ಅಥವಾ ಹಿತೈಷಿಗಳು ತತ್ ಕ್ಷಣ ಹತ್ತಿರದ ಆಸ್ಪತ್ರೆಗೆ ದಾಖಲಿಸಬೇಕೆಂದು ಇಲ್ಲಿನ ವೈಟ್ ಫೀಲ್ಡ್ ನಲ್ಲಿರುವ ಮೆಡಿಕೋವರ್ ಆಸ್ಪತ್ರೆಯ ವೈದ್ಯರು ಸಲಹೆ ನೀಡಿದ್ದಾರೆ.

ಇಂಥದ್ದೇ ಒಂದು ಪ್ರಸಂಗ ಪುಟ್ಟಪರ್ತಿಯಲ್ಲಿ ನಡೆದಿತ್ತು. ಒಂದೂವರೆ ವರ್ಷದ ಮಗು ಆಟವಾಡುತ್ತಿದ್ದಾಗ ದೊಡ್ಡ ಗಾತ್ರದ ಲೋಹದ ಪಿನ್ ಅನ್ನು ನುಂಗಿಬಿಟ್ಟಿತು. ಆಶ್ಚರ್ಯವೆಂದರೆ ಮಗುವಿಗೆ ವಾಂತಿ, ಜ್ವರ ಅಥವಾ ಹೊಟ್ಟೆ ಉಬ್ಬರದ ಯಾವುದೇ ಲಕ್ಷಣಗಳು ಕಂಡುಬAದಿರಲಿಲ್ಲ. ಆದರೆ ಮಗು ಮಲವಿಸರ್ಜನೆ ಮಾಡದೇ ಇರುವುದು ಹೆತ್ತವರಲ್ಲಿ ಆತಂಕ ಹುಟ್ಟಿಸಿತು.

ಪುಟಪರ್ತಿಯಲ್ಲಿದ್ದ ಈ ಕುಟುಂಬ ಮರುದಿನ ಮಗುವನ್ನು ಬೆಂಗಳೂರಿನ ಮೆಡಿಕೋವರ್ ಆಸ್ಪತ್ರೆಗೆ ಕರೆದುಕೊಂಡು ಬಂತು. ತಕ್ಷಣ ಮಗುವಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ಆರಂಭಿಸಲಾಯಿತು. ಗ್ಯಾಸ್ಟ್ರೋ ಎಂಟರಾಲಜಿಸ್ಟ್ ಡಾ. ರೋಹಿತ್ ಮೈದೂರ್ ಅವರು ಎಕ್ಸ್ ರೇ ಮೂಲಕ ಪಿನ್‌ನ ಸ್ಥಳವನ್ನು ಪತ್ತೆ ಹಚ್ಚಿ, ಎಂಡೋಸ್ಕೋಪಿ ಮೂಲಕ ಅದನ್ನು ಸುರಕ್ಷಿತವಾಗಿ ತೆಗೆದುಹಾಕಿದರು.



ತ್ವರಿತ ನಿರ್ಧಾರ, ಸಮಯೋಚಿತ ಚಿಕಿತ್ಸೆ ಮತ್ತು ವೈದ್ಯರ ನಿಪುಣತೆ ಈ ಎಲ್ಲವೂ ಸೇರಿ ಒಂದು ಅಮೂಲ್ಯ ಜೀವವನ್ನು ರಕ್ಷಿಸಲು ಇದರಿಂದ ಸಾದ್ಯವಾಯಿತು. ಮಕ್ಕಳ ತಜ್ಞ ಡಾ. ಅನುರಾಗ್ ಮಹಾಗಾಂವ್ಕರ್ ಅವರ ಪರಿಪೂರ್ಣ ಆರೈಕೆ ಫಲವಾಗಿ ಮಗು ಸಂಪೂರ್ಣವಾಗಿ ಚೇತರಿಸಿಕೊಂಡಿದೆ. ಅನಸ್ಥೇಷಿಯ ತಜ್ಞೆ ಡಾ. ಮೋನಿಕಾ ಗುಪ್ತಾ,  ಚಿಕಿತ್ಸೆಯು ಸುರಕ್ಷಿತವಾಗಿ ನೆರವೇರಿಸಲು ಪ್ರಮುಖ ಪಾತ್ರವಹಿಸಿದರು. ಇದೇವೇಳೆ ಮಕ್ಕಳ ಪೋಷಕರಿಗೆ ಎಚ್ಚರಿಕೆ ನೀಡಿದ ಡಾ. ರೋಹಿತ್ ಮೈದೂರ್ ಮತ್ತು ಡಾ. ಅನುರಾಗ್ ಮಹಾಗಾಂವ್ಕರ್ ಪ್ರಮುಖ ಸಲಹೆಗಳನ್ನು ನೀಡಿದ್ದಾರೆ.

 

 

ಮಗು ಏನಾದರೂ ವಸ್ತು ನುಂಗಿದರೆ ವಾಂತಿಯಾಗುವವರೆಗೆ ಕಾಯಬಾರದು. ಬಾಳೆಹಣ್ಣು ಕೊಟ್ಟು ಮಲವಿಸರ್ಜನೆ ಆಗಲು ಕಾಯಬಾರದು. ಯಾವುದೇ ವಿಳಂಬವಿಲ್ಲದೇ ಕೂಡಲೇ ವೈದ್ಯರ ಸಲಹೆ ಪಡೆಯಬೇಕು. ಮಕ್ಕಳ ಆರೋಗ್ಯ ವಿಷಯದಲ್ಲಿ ಎಚ್ಚರತೆ ಅತ್ಯಗತ್ಯ. ಯಾವುದೇ ಅನುಮಾನಾಸ್ಪದ ವಸ್ತುಗಳನ್ನು ಮಗು ನುಂಗಿದರೆ ತಕ್ಷಣ ಆಸ್ಪತ್ರೆಗೆ ಕರೆದುಕೊಂಡು ಬರಬೇಕು ಎಂದು ಅವರು ಎಚ್ಚರಿಸುತ್ತಾರೆ. ತಮ್ಮ ಮಗುವಿನ ಪ್ರಾಣ ಉಳಿಸಿದ ವೈದ್ಯರಿಗೆ ಪುಟ್ಟಪರ್ತಿಯ ಕುಟುಂಬದವರು ಕೃತಜ್ಞತೆ ಸಲ್ಲಿಸಿ ನಿಟ್ಟುಸಿರು ಬಿಟ್ಟಿದ್ದಾರೆ. ಇಂಥ ಸಂದರ್ಭಗಳು ನಮ್ಮ ನಿಮ್ಮ ಕುಟುಂಬ ಅಥವಾ ನೆರೆಹೊರೆಯಲ್ಲಿ ಕಂಡು ಬರಬಹುದಾದ್ದರಿಂದ ಮಕ್ಕಳ ಕುರಿತು ಎಲ್ಲರಿಗೂ ಜಾಗೃತಿ ಅಗತ್ಯವೆಂದು ಮೆಡಿಕೋವರ್ ಆಸ್ಪತ್ರೆಯ ವೈದ್ಯರು ಮಾನವೀಯ ನೆಲೆಗಟ್ಟಿನಲ್ಲಿ ತಿಳಿಸಿದ್ದಾರೆ.

 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ