ಜಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಜಗಳೂರು ಇಲ್ಲಿ ಇಂದು ರಾಷ್ಟ್ರೀಯ ಗ್ರಂಥಾಲಯ ದಿನಾಚರಣೆಯನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳು ಮಾತನಾಡಿದ ಪ್ರೊ ವೆಂಕಟೇಶ್ ಬಾಬು ಅವರು ಗ್ರಂಥಾಲಯ ದಿನಾಚರಣೆಯ ಮಹತ್ವ, ಪುಸ್ತಕಗಳ ಮಹತ್ವ ಹಾಗೂ ವಿದ್ಯಾರ್ಥಿಗಳ ಜೀವನದಲ್ಲಿ ಓದುವ ಹವ್ಯಾಸದ ಅಗತ್ಯತೆಯನ್ನು ವಿವರಿಸಿದರು. ಓದು ಮತ್ತು ಗ್ರಂಥಾಲಯ ಪರಸ್ಪರ ಪೂರಕವಾಗಿದ್ದು, ವಿದ್ಯಾರ್ಥಿಗಳು ಕಾಲೇಜಿನ ಗ್ರಂಥಾಲಯವನ್ನು ಉತ್ತಮವಾಗಿ ಬಳಸಿಕೊಂಡಾಗ ತಮ್ಮ ಜ್ಞಾನವನ್ನು ಹತ್ತಾರು ಪಟ್ಟು ಹೆಚ್ಚಿಸಿಕೊಳ್ಳಲು ಸಾಧ್ಯ ಎಂದು ಪ್ರೇರಣಾದಾಯಕವಾಗಿ ನುಡಿದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಪ್ರೊ ರಾಜೇಶ್ವರಿ ಪೂಜಾರಿ ರವರು ಮಾತನಾಡುತ್ತಾ ಪುಸ್ತಕಗಳು ಕೇವಲ ಮಾಹಿತಿಯ ಮೂಲಗಳಲ್ಲ; ಅವು ವಿದ್ಯಾರ್ಥಿಗಳ ಚಿಂತನಾ ಶಕ್ತಿ, ವಿಶ್ಲೇಷಣಾ ಸಾಮರ್ಥ್ಯ, ವ್ಯಕ್ತಿತ್ವ ವಿಕಸನ ಹಾಗೂ ಆತ್ಮವಿಶ್ವಾಸವನ್ನು ಬೆಳೆಸುವ ಪ್ರಮುಖ ಸಾಧನಗಳಾಗಿವೆ. ಆದ್ದರಿಂದ ವಿದ್ಯಾರ್ಥಿಗಳು ಪ್ರತಿನಿತ್ಯ ಸ್ವಲ್ಪ ಸಮಯವನ್ನು ಓದಿಗೆ ಮೀಸಲಿಟ್ಟು, ಗ್ರಂಥಾಲಯದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಅವರು ಕರೆ ನೀಡಿದರು.
ಗ್ರಂಥಪಾಲಕಾರದ ಶ್ರೀ ಅನಿಲ್ ಬೋರಯ್ಯ ಅವರು ಗ್ರಂಥಾಲಯ ದಿನಾಚರಣೆಯ ಕುರಿತು ಉಪನ್ಯಾಸ ನೀಡಿದರು
ಕಾರ್ಯಕ್ರಮದಲ್ಲಿ ಪ್ರೊ ಸತೀಶ್, ಪ್ರೊ ಮಹಾಂತೇಶ್, ಪ್ರೊ ಬಸವರಾಜ್ ಸೇರಿದಂತೆ ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮವು ವಿದ್ಯಾರ್ಥಿಗಳಲ್ಲಿ ಓದುವ ಅಭಿರುಚಿ ಮತ್ತು ಗ್ರಂಥಾಲಯ ಬಳಕೆಯ ಕುರಿತು ಜಾಗೃತಿ ಮೂಡಿಸುವ ಮೂಲಕ ಯಶಸ್ವಿಯಾಗಿ ನಡೆಯಿತು.