LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಪಕ್ಷವನ್ನು ಸಂಘಟಿಸಲು ಮಧು ಬಂಗಾರಪ್ಪ ಸಲಹೆ

ಬಳ್ಳಾರಿ: ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲ ಸಮುದಾಯದವರ ಏಳ್ಗೆಗೆ ಶ್ರಮಿಸುತ್ತಿದೆ. ವಿಶೇಷವಾಗಿ ಹಿಂದುಳಿದವರು, ದಲಿತರು ಮತ್ತು ಅಲ್ಪಸಂಖ್ಯಾತರ ಸಬಲೀಕರಣಕ್ಕೆ ಹೆಚ್ಚು ಒತ್ತು ನೀಡುತ್ತಿದ್ದು ಪಕ್ಷವನ್ನು ತಳಮಟ್ಟದಲ್ಲಿ ಸಂಘಟಿಸಿ, ಸರ್ಕಾರದ ಯೋಜನೆಗಳ ಬಗ್ಗೆ ಜನರಿಗೆ ಅರಿವು ಮೂಡಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷರಾದ ಮಧು ಬಂಗಾರಪ್ಪ ಸಲಹೆ ನೀಡಿದರು.

 

ಡಾ.ಸಿದ್ರಾಮ ದಾದಾರಾವ್ ವಾಘಮಾರೆ ಅವರಿಗೆ ಕೆಪಿಸಿಸಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಉಪಾಧ್ಯಕ್ಷರನ್ನಾಗಿ ನಿಯೋಜಿಸಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ನೇತೃತ್ವದ ಸರ್ಕಾರ ಸುಲಲಿತವಾಗಿ ಮುನ್ನಡೆಯುತ್ತಿದೆ. ಪಂಚ ಗ್ಯಾರಂಟಿ ಯೋಜನೆಗಳು ಕೋಟ್ಯಾಂತರ ಜನರ ಬಾಳಲ್ಲಿ ಬೆಳಕು ನೀಡುತ್ತಿವೆ. ಹಿಂದುಳಿದ ಸಮುದಾಯದವರು ತಮ್ಮ ಮಕ್ಕಳಿಗೆ ಹೆಚ್ಚಿನ ಶಿಕ್ಷಣ ಒದಗಿಸಬೇಕು. ಸಮುದಾಯಗಳನ್ನು ಸಂಘಟಿಸಿ ಮುಖ್ಯ ವಾಹಿನಿಗೆ ಬರಬೇಕು. ಈ ದಿಸೆಯಲ್ಲಿ ಕಾಂಗ್ರೆಸ್ ಪಕ್ಷ ಎಲ್ಲ ರೀತಿಯಿಂದ ನೆರವಾಗಲಿದ್ದು ಡಾ.ಸಿದ್ರಾಮ ವಾಘಮಾರೆ ಅವರು ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗಲಿದ್ದಾರೆ ಎನ್ನುವ ವಿಶ್ವಾಸವಿದೆ ಎಂದು ಮಧು ಬಂಗಾರಪ್ಪ ತಿಳಿಸಿದರು.



ಬೆಂಗಳೂರಿನ ಸದಾಶಿವ ನಗರದಲ್ಲಿರುವ ನಿವಾಸದಲ್ಲಿ ಮಧುಬಂಗಾರಪ್ಪನವರನ್ನು ಭೇಟಿಯಾಗಿ ಅಭಿನಂದಿಸಿದ ಡಾ.ಸಿದ್ರಾಮ ವಾಘಮಾರೆ ಅವರಿಗೆ ಮಧು ಬಂಗಾರಪ್ಪ ಈ ಸಲಹೆ ನೀಡಿದರು. ಕಳೆದ ನಾಲ್ಕು ದಶಕಗಳಿಂದ ಡಾ.ಸಿದ್ರಾಮ ವಾಘಮಾರೆ ಅವರು ಪಕ್ಷಕ್ಕಾಗಿ ಶ್ರಮಿಸುತ್ತಿದ್ದಾರೆ. ಸಚಿವರಾದ ಈಶ್ವರ್ ಖಂಡ್ರೆ, ರಹೀಂ ಖಾನ್, ಪ್ರಿಯಾಂಕ್ ಖರ್ಗೆ, ಮಾಜಿ ಸಚಿವ ರಾಜಶೇಖರ ಪಾಟೀಲ್ ಸೇರಿದಂತೆ ಹಲವಾರು ನಾಯಕರೊಂದಿಗೆ ಒಡನಾಟ ಇರಿಸಿಕೊಂಡಿದ್ದಾರೆ. ಎಐಸಿಸಿ ವರಿಷ್ಠರು ಮತ್ತು ಕೆಪಿಸಿಸಿ ನಾಯಕರೊಂದಿಗೆ ಗುರುತಿಸಿಕೊಂಡಿರುವ ಇವರು ರಾಜ್ಯಮಟ್ಟದ ಜಾನಪದ ಕಲಾವಿದರು ಕೂಡ. ಇವರು ಪಕ್ಷದ ಸಂಘಟನೆಗೆ ಮತ್ತು ಪಕ್ಷದ ನಿಷ್ಠೆ ಗಮನಿಸಿ ವರಿಷ್ಠರು ಈ ಸ್ಥಾನಮಾನ ನೀಡಿದ್ದಾರೆ. ಕಲ್ಯಾಣ ಕರ್ನಾಟಕವಲ್ಲದೇ ನಾಡಿನಾದ್ಯಂತ ಸಂಚರಿಸಿ ಪಕ್ಷದ ತತ್ವ, ನಿಷ್ಠೆಗಳು ಮತ್ತು ಸರ್ಕಾರದ ಯೋಜನೆಗಳನ್ನು ಜನರಿಗೆ ಮನವರಿಕೆ ಮಾಡಿ ಕೊಡುವ ಇಂಗಿತವನ್ನು ಡಾ.ಸಿದ್ರಾಮ ವಾಘಮಾರೆ ವ್ಯಕ್ತಪಡಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ