LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರಾಮಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬ

ನಾಯಕನಹಟ್ಟಿ : ಹಾಯ್ಕಲ್ ಗ್ರಾಮದಲ್ಲಿ ಆರಾಧ್ಯ ದೈವ ರಾಮಲಿಂಗೇಶ್ವರ ದೇವಾಲಯದಲ್ಲಿ ಮಹಾಶಿವರಾತ್ರಿ ಹಬ್ಬವನ್ನು ಭಕ್ತರು ಸಡಗರ ಸಂಭ್ರಮದಿಂದ ಆಚರಿಸಿದರು. ದೇವಾಲಯದಲ್ಲಿ ವಿಶೇಷ ಪೂಜೆ ಕಾರ್ಯಗಳು ನಡೆಯಿತು. ಬೆಳಿಗ್ಗೆ ಮತ್ತು ರಾತ್ರಿಯ ವೇಳೆಯಿಂದ ಮಹಿಳೆಯರು ಕುಟುಂಬದೊಂದಿಗೆ ತೆರಳಿ ದೇವರ ದರ್ಶನ ಪಡೆದರು.

ಭಕ್ತರು ಭಕ್ತಿ ಸಾಗರವೇ ಹರಿದು ಬಂದಿತ್ತು. ದೇವಾಲಯದಲ್ಲಿ ಮಕ್ಕಳಿಗೆ ಬೆಲ್ಲದ ತೂಕ ನೇರವೇರಿಸಿದರು. ಶಿವರಾತ್ರಿ ದಿನದ ಅಂಗವಾಗಿ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಅನೇಕರು ಬೆಳಿಗ್ಗೆಯಿಂದಲೇ ಉಪವಾಸವಿರುತ್ತಾರೆ. ಮನೆಗಳಲ್ಲಿ ಹಬ್ಬದ ಸಂಭ್ರಮ ಎಲ್ಲೆಡೆ ಮನೆ ಮಾಡಿತ್ತು. ಭಕ್ತರು ಅತ್ಯಂತ ಸಡಗರದಿಂದ ಮತ್ತು ಶ್ರದ್ಧ ಭಕ್ತಿಯಿಂದ ದೇವರನ್ನು ಆರಾಧಿಸುತ್ತಾರೆ ದೃಶ್ಯ ಸಾಮಾನ್ಯವಾಗಿತ್ತು. ಅನೇಕ ಮಕ್ಕಳು ವೇಷಭೂಷಣವನ್ನು ತೊಡಗಿಕೊಂಡಿದ್ದರು. ರಾಮಲಿಂಗೇಶ್ವರ ವಿಗ್ರಹವನ್ನು ಪಲ್ಲಕ್ಕಿಯಲ್ಲಿ ಕುರಿಸುವುದರ ಮೂಲಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮುತೈದೆಯರು ಕುಂಭಮೇಳ, ದೀಪೋತ್ಸವ ಮೆರವಣಿಗೆಯಲ್ಲಿ ಸಾಗಿದರು.

 

ಹಾಯ್ಕಲ್ ಗ್ರಾಮದ ಎನ್.ನಾಗರಾಜರೆಡ್ಡಿ ಮಾತನಾಡಿ ಶಿವರಾತ್ರಿ ಹಬ್ಬದ ಪ್ರಯುಕ್ತ 52ವರ್ಷಗಳಿಂದಲೂ ಹಬ್ಬಗಳನ್ನು ಆಚರಿಸುತ್ತ ಬಂದಿದ್ದೇವೆ. ಕುಂಭಮೇಳದಲ್ಲಿ ಇದ್ದಂತ ನೀರನ್ನು ರಾಮಲಿಂಗೇಶ್ವರ ಸ್ವಾಮಿಯ ಅಭಿಷೇಕ ಮಾಡಿ ಬಹಳ ಆದ್ಧೂರಿಯಾಗಿ ಆಚರಿಸುತ್ತೇವೆ. ಸುಮಾರು 2 ಸಾವಿರದಿಂದ 3 ಸಾವಿರದವರೆಗೆ ಬರುವಂತ ಭಕ್ತಧಿಗಳಿಗೆ ಅನ್ನದಾಸೋಹ ಇರುತ್ತದೆ ಎಂದು ಅವರು ಮಾತನಾಡಿದರು.

 

ಈ ಸಂದರ್ಭದಲ್ಲಿ ಉಪಸ್ಥಿತರಾದ ಎನ್.ನಾಗರಾಜರೆಡ್ಡಿ, ಕೆ.ಜಿ.ಲೋಕೇಶ್‌ರೆಡ್ಡಿ, ಪಿ.ಚಿದಾನಂದ, ರವಿಶಂಕರ್‌ರೆಡ್ಡಿ, ಎಲ್.ವೆಂಕಟೇಶ್‌ರೆಡ್ಡಿ, ನಾಗರಾಜ್‌ರೆಡ್ಡಿ, ಕ್ಯಾಸಕಿಪಾಪಯ್ಯ, ಡಬ್ಬರಾಜಪ್ಪ, ಹಾಗೂ ಭಕ್ತಾಧಿಗಳು ಮುಖಂಡರುಗಳು ಇದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ