LIVE TV StateNationalPoliticsCrimeEntertainmentSportsEducationFINANCE & TAXATION
Districts Bangalore

ಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರ

ಬೆಂಗಳೂರು: ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ನೂತನ ಪ್ರಭಾರ ಕುಲಪತಿಯಾಗಿ ಶ್ರೀಮತಿ ವಿ.ಎಚ್.ಡಿ. ಸೆಂಟ್ರಲ್ ಇನ್‌ಸ್ಟಿಟ್ಯೂಟ್ ಆಫ್ ಹೋಮ್ ಸೈನ್ಸ್ ಮಹಾವಿದ್ಯಾಲಯದ ಪ್ರಾಧ್ಯಾಪಕರು ಹಾಗೂ ನಿರ್ದೇಶಕರಾದ ಡಾ. ಮಮತಾ ಬಿ. ಅವರು ಅಧಿಕಾರ ಸ್ವೀಕರಿಸಿದರು.

 

ಇಲ್ಲಿಯವರೆಗೆ ಪ್ರಭಾರ ಕುಲಪತಿಗಳಾಗಿ ಕಾರ್ಯನಿರ್ವಹಿಸುತ್ತಿದ್ದ ಡಾ. ಅಶೋಕ ಎಸ್.ಬಿ. ಅವಧಿ ಶನಿವಾರ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ತೆರವಾದ ಸ್ಥಾನಕ್ಕೆ ಡಾ. ಮಮತಾ ಬಿ. ಅವರನ್ನು ನೂತನ ಪ್ರಭಾರ ಕುಲಪತಿಯಾಗಿ ನೇಮಕ ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ.

 

ಹೋಮ್ ಸೈನ್ಸ್ ಫ್ಯಾಮಿಲಿ ರಿಸೋರ್ಸ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಪರಿಣತಿ:

ಹೋಮ್ ಸೈನ್ಸ್ ಫ್ಯಾಮಿಲಿ ರಿಸೋರ್ಸ್ ಮ್ಯಾನೇಜ್ಮೆಂಟ್ ವಿಷಯದಲ್ಲಿ ಪರಿಣತಿ ಹೊಂದಿದ್ದು, ಇವರು ಶೈಕ್ಷಣಿಕವಾಗಿ 29 ವರ್ಷಗಳ ಬೋಧನಾ ಅನುಭವವನ್ನು, 25ಕ್ಕೂ ಅಧಿಕ ಸಂಶೋಧನಾ ಪ್ರಕಟಣೆಗಳನ್ನು, 20ಕ್ಕೂ ಅಧಿಕ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಶೋಧನಾ ಪ್ರಬಂಧಗಳನ್ನು ಮಂಡಿಸಿದ್ದು, ಸಂಪಾದಿತ ಪುಸ್ತಕಗಳಲ್ಲಿ 5 ಅಧ್ಯಾಯಗಳನ್ನು ಹೊರತಂದಿದ್ದಾರೆ. 4 ಸಂಶೋಧನಾರ್ಥಿಗಳಿಗೆ ಮಾರ್ಗದರ್ಶನ ನೀಡಿದ್ದಾರೆ. ಇನ್ನು ವಿವಿಯ ಹೋಮ್ ಸೈನ್ಸ್ ಪದವಿ ವಿಭಾಗದ ಬೋರ್ಡ್ ಆಫ್ ಸ್ಟಡೀಸ್ ಅಧ್ಯಕ್ಷರಾಗಿ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಹಾಗೆ ಯುಜಿಸಿ ಪ್ರಾಯೋಜಿತ ಮೈನರ್ ಪ್ರಾಜೆಕ್ಟ್ ಒಂದನ್ನು ಪೂರ್ಣಗೊಳಿಸಿರುವುದು ವಿಶೇಷ.

 

ಈಗಾಗಲೇ ಪ್ರತಿಷ್ಠಿತ ವಿವಿಗಳಾದ ಬೆಂಗಳೂರು ನಗರ, ಮೈಸೂರು, ಮಂಗಳೂರು ಹಾಗೂ ನಿಟ್ಟೆ ವಿವಿ, ಮೌಂಟ್ ಕಾರ್ಮೆಲ್ ವಿವಿಗಳಲ್ಲಿ ಬೋರ್ಡ್ ಆಫ್ ಎಕ್ಸಾಮಿನೇಷನ್ಸ್ ಮತ್ತು ಬೋರ್ಡ್ ಆಫ್ ಸ್ಟಡೀಸ್ ಇಂತಹ ಅಧ್ಯಕ್ಷರಾಗಿ, ಸದಸ್ಯರಾಗಿ ಜವಾಬ್ದಾರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

 

ಇದೇ ಸಮಯದಲ್ಲಿ ನಿಕಟಪೂರ್ವ ಕುಲಪತಿ ಡಾ. ಅಶೋಕ ಎಸ್.ಬಿ, ಮೌಲ್ಯಮಾಪನ ಕುಲಸಚಿವ ಪ್ರೊ.ವೈ.ರಮೇಶ್, ಆಡಳಿತ ಕುಲಸಚಿವೆ ಶ್ರೀಮತಿ ಸೀಮಾ ಬಿ. ನಾಯಕ್,

ಪ್ರೊ.ಆರ್.ಕೆ.ವಾಣಿಶ್ರೀ, ವಿವಿಯ ಬೋಧಕ-ಬೋಧಕೇತರ ಸಿಬ್ಬಂದಿಗಳು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

ಮಹಾರಾಣಿ ಕ್ಲಸ್ಟರ್ ವಿವಿಯನ್ನು ಅಂತರರಾಷ್ಟ್ರೀಯ ಮಟ್ಟದಲ್ಲಿ ಮನ್ನಣೆ ಗಳಿಸಲು, ವಿಶೇಷವಾಗಿ ಶೈಕ್ಷಣಿಕ ಕ್ಷೇತ್ರದಲ್ಲಿ ವಿಶ್ವವಿದ್ಯಾಲಯದ ಅಭಿವೃದ್ಧಿ, ವಿದ್ಯಾರ್ಥಿ ಸ್ನೇಹಿ ವಾತಾವರಣ, ಸಿಬ್ಬಂದಿಯ ಪ್ರಗತಿಗೆ ಭವಿಷ್ಯದಲ್ಲಿ ಮತ್ತಷ್ಟು ಶ್ರಮಿಸುತ್ತೇನೆ.

- ಡಾ. ಮಮತಾ ಬಿ, ನೂತನ ಪ್ರಭಾರ ಕುಲಪತಿಗಳು, ಮಹಾರಾಣಿ ಕ್ಲಸ್ಟರ್ ವಿವಿ

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ