LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಹಾರಾಣಿ ಕ್ಲಸ್ಟರ್ ವಿವಿ: ವಿತ್ತಾಧಿಕಾರಿ ವಿರುದ್ದ ಧರಣಿ 25ಕ್ಕೆ

ನಾಳೆ ಬೃಹತ್ ಪ್ರತಿಭಟನೆಗೆ ಸಜ್ಜಾಗಿರುವ ಮಹಾರಾಣಿ ಕ್ಲಸ್ಟರ್ ವಿವಿಯ ವಿದ್ಯಾರ್ಥಿನಿಯರು

ಬೆಂಗಳೂರು: ನಗರದ ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯದ ವಿತ್ತಾಧಿಕಾರಿ ಎಂ.ಎಸ್.ಚೇತನ್ ಕುಮಾರ್ ಅವರಿಂದ ನಿರಂತರ ಮಾನಸಿಕ ಕಿರುಕುಳಕ್ಕೆ ಒಳಗಾದ ವಿದ್ಯಾರ್ಥಿನಿಯರು ಹಾಗೂ ಅತಿಥಿ ಉಪನ್ಯಾಸಕಿಯರು ಹಾಗೂ ಮಹಿಳಾ ಸಿಬ್ಬಂದಿಗಳು ಒಟ್ಟುಗೂಡಿ ಕುಲಪತಿಗಳ ಕಚೇರಿ ಮುಂಭಾಗ ತಮಗೆ ಆಗಿರುವ ಅನ್ಯಾಯಗಳನ್ನು ಪ್ರತಿಭಟನೆಯ ಮುಖಾಂತರ ಪ್ರತಿಭಟಿಸಿ ಸರ್ಕಾರದ ಗಮನ ಸಳೆಯಲು, ತಮ್ಮ ಸಮಸ್ಯೆಗೆ ಪರಿಹಾರವನ್ನು ಕಂಡುಕೊಳ್ಳಲು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ಬೆಂಬಲದೊಂದಿಗೆ ಹೋರಾಟ ಮಾಡುವುದಾಗಿ ಪ್ರಕಟಣೆಯಲ್ಲಿ ಹೇಳಲಾಗಿದೆ.

 

ವಿದ್ಯಾರ್ಥಿನಿಯರ ಕ್ಷೇಮಾಭಿವೃದ್ಧಿ ಒಕ್ಕೂಟ ಹಾಗೂ ರಾಷ್ಟ್ರೀಯ ಅಂಬೇಡ್ಕರ್ ಸೇನೆ ಜಂಟಿಯಾಗಿ ಬಿಡುಗಡೆ ಮಾಡಿರುವ ಪ್ರಕಟಣೆಯಲ್ಲಿ,ವಿತ್ತಾಧಿಕಾರಿಯನ್ನು ತಕ್ಷಣ ಅಮಾನತುಗೊಳಿಸಿ ಕಾನೂನು ಕ್ರಮ ಕೈಗೊಳ್ಳಬೇಕು. ಹಾಗೆಯೇ ಇಬ್ಬರು ಮಹಿಳಾ ಅತಿಥಿ ಉಪನ್ಯಾಸಕಿಯರಿಗೆ ಕಳೆದ ಆರು ತಿಂಗಳಿನಿಂದ ನಿರಂತರ ದಿನನಿತ್ಯ ಕಿರುಕುಳ ನೀಡಲಾಗುತ್ತಿದೆ. ಮಹಿಳಾ ಸಿಬ್ಬಂದಿಯನ್ನು ಚೇಂಬರ್ಗೆ ಒಂಟಿಯಾಗಿ ಕರೆಸಿಕೊಂಡು ಅಸಭ್ಯವಾಗಿ ವರ್ತಿಸುವುದು, ಮಾನಸಿಕ ಒತ್ತಡ ಹೇರುವುದು ನಡೆಯುತ್ತಿದೆ ಎಂದು ಸಂಘಟನೆಗಳ ಪದಾಧಿಕಾರಿಗಳು ದೂರಿದ್ದಾರೆ.

 

ಅತಿಥಿ ಉಪನ್ಯಾಸಕರ ಸಂಬಳದ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ ಇಡಲಾಗಿದೆ ಎಂಬ ಆರೋಪವೂ ಕೇಳಿಬಂದಿದೆ. ಕುರಿತು ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಹ ಈಗಾಗಲೇ ಸಲ್ಲಿಸಲಾಗಿದೆ ಎಂದು ರಾಷ್ಟ್ರೀಯ ಅಂಬೇಡ್ಕರ್ ಸೇನೆಯ ರಾಷ್ಟ್ರಾಧ್ಯಕ್ಷ ಅಧ್ಯಕ್ಷರಾದ ಅರ್ಜುನ್ ಗೋಪಾಲಯ್ಯ ಅವರು ತಿಳಿಸಿದ್ದಾರೆ.

 

ಅತಿಥಿ ಉಪನ್ಯಾಸಕರ ಸಂಬಳದ ಬಿಲ್ ಪಾಸ್ ಮಾಡಲು ಲಂಚದ ಬೇಡಿಕೆ, ಮತ್ತಿತರ ವಿಷಯಗಳ ಆರೋಪವೂ ಕೇಳಿಬಂದಿದೆ. ಈಗಾಗಲೇ ರಾಜ್ಯ ಮಹಿಳಾ ಆಯೋಗಕ್ಕೂ ದೂರು ಸಲ್ಲಿಸಲಾಗಿದೆ.

- ಶ್ರೀ ಅರ್ಜುನ್ ಗೋಪಾಲಯ್ಯ, ರಾಷ್ಟ್ರಾಧ್ಯಕ್ಷರು, ರಾಷ್ಟ್ರೀಯ ಅಂಬೇಡ್ಕರ್ ಸೇನೆ

Author
Rakesh V
is Digital online news channel, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ