LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಮಾದಿಗ ಸಮುದಾಯ ಕಡೆಗಣಿಸಿದ ಶಾಸಕ ಎನ್.ವೈ.ಜಿ

ಪಪಂ.ನಾಮನಿರ್ದೇಶನದಲ್ಲಿ ಮಾದಿಗ ಸಮದಾಯಕ್ಕೆ  ಅನ್ಯಾಯ; ಮುಖಂಡರ  ಆರೋಪ

ನಾಯಕನಹಟ್ಟಿ ; ಪಟ್ಟಣ ಪಂಚಾಯಿತಿಗೆ ಸರ್ಕಾರದಿಂದ ನಾಮ ನಿರ್ದೇಶನಗೊಳ್ಳುವ ಸದಸ್ಯರ ನೇಮಕಾತಿ ವಿಷಯದಲ್ಲಿ ಕ್ಷೇತ್ರದ ಶಾಸಕರು ಮತ್ತು ಕಾಂಗ್ರೆಸ್ ಪಕ್ಷವು ಮಾದಿಗ ಸಮುದಾಯವನ್ನು ನಿರ್ಲಕ್ಷಿಸಿದೆ ಎಂದು ರಾಷ್ಟ್ರೀಯ ಅಹಿಂದ ಸಂಘಟನೆಯ ಪರಿಶಿಷ್ಟ ವರ್ಗಗಳ ವಿಭಾಗದ ಜಿಲ್ಲಾ ಘಟಕದ ಅಧ್ಯಕ್ಷ ಇ.ನಾಗರಾಜ ಮೀಸೆ ಅಸಮಧಾನ ವ್ಯಕ್ತಪಡಿಸಿದರು.

 

ಪಟ್ಟಣದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಳೆದ ಎರಡು ದಿನಗಳ ಹಿಂದೆ ನಾಯಕನಹಟ್ಟಿ ಪಟ್ಟಣ ಪಂಚಾಯಿತಿಗೆ ಸರ್ಕಾರದಿಂದ ಮೂವರನ್ನು ನಾಮನಿರ್ದೇಶನ ಸದಸ್ಯರನ್ನು ಮೊಳಕಾಲ್ಮುರು ಕ್ಷೇತ್ರದ ಶಾಸಕ ಎನ್.ವೈ.ಗೋಪಾಲಕೃಷ್ಣ ಅವರ ಶಿಫಾರಸಿನ ಮೇರೆಗೆ ನೇಮಕ ಮಾಡಿಕೊಳ್ಳಲಾಗಿದೆ. ಇದರಲ್ಲಿ ಶಾಸಕರು ವಾಲ್ಮೀಕಿ ನಾಯಕ ಸಮುದಾಯದ ಒಬ್ಬರು, ಮುಸ್ಲಿಂ ಹಾಗೂ ಕುರುಬ ಸಮುದಾಯದ ಒಟ್ಟು ಮೂವರನ್ನು ನಾಮನಿರ್ದೇಶನ ಮಾಡಲು ಶಿಫಾರಸು ಮಾಡಿದ್ದಾರೆ.

ನಾಯಕನಹಟ್ಟಿ ಪ.ಪಂ.ವ್ಯಾಪ್ತಿಯಲ್ಲಿ ಎರಡನೇ ಅತೀ ದೊಡ್ಡ ಸಮುದಾಯವಾದ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡದೇ ಶಾಸಕರು ಸ್ವಜನ ಪಕ್ಷಪಾತ ಹಾಗೂ ಮಾದಿಗರ ವಿರೋಧಿ ಮನಸ್ಥಿತಿಯನ್ನು ತೋರಿಸಿದ್ದಾರೆ. ವಿಧಾನಸಭಾ ಮತ್ತು ಲೋಕಸಭಾ ಚುನಾವಣೆಯಲ್ಲಿ ಮಾದಿಗ ಸಮುದಾಯದ ಮತಗಳನ್ನು ಪಡೆದಿದ್ದಾರೆ. ಈಗ ಸಮುದಾಯಕ್ಕೆ ಸ್ಥಳಿಯವಾಗಿ ರಾಜಕೀಯ ಪ್ರಾತಿನಿಧ್ಯವನ್ನು ಇಲ್ಲವಾಗಿಸುವ ಹುನ್ನಾರಕ್ಕೆ ಮುಂದಾಗಿದ್ದಾರೆ ಎಂದು ಆರೋಪಿಸಿದರು.

 

ಪಟ್ಟಣದ ಅಂಬೇಡ್ಕರ್ ಕಾಲೋನಿಯಲ್ಲಿರುವ ಸರ್ಕಾರಿ ಶಾಲೆಗೆ ಕೊಠಡಿಗಳನ್ನು ಮಂಜೂರು ಮಾಡುವಂತೆ ಹಲವು ಬಾರಿ ಶಾಸಕರಿಗೆ ಮನವಿ ಸಲ್ಲಿಸಲಾಗಿತ್ತು. ಅಧಿಕಾರಿಗಳು ಶಾಲೆಗೆ ಭೇಟಿ ನೀಡಿ ಪರಿಶೀಲಿಸಿದ್ದರು. ಆದರೆ ಕೊಠಡಿ ನಿರ್ಮಾಣಕ್ಕೆ ಅನುದಾನ ಬಿಡುಗಡೆಯಾಗಲಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

ಮಾದಿಗರ ಹಟ್ಟಿಗಳಿಗೆ ಭೇಟಿ ನೀಡದ ಶಾಸಕರು

ಮುಖಂಡ ಟಿ.ಬಸವರಾಜ ಮಾತನಾಡಿ, ಪಟ್ಟಣ ಪಂಚಾಯತಿಗೆ  ನಾಮ ನಿರ್ದೇಶನ ಮಾಡುವ ವಿವೇಚನಾಧಿಕಾರವನ್ನ ಮಾದಿಗ ಸಮುದಾಯಕ್ಕೆ ಪ್ರಾತಿನಿಧ್ಯ ಕೊಡಲು ಬಳಸದೇ ಪದೇ ಪದೇ ಸಮುದಾಯವನ್ನು ವಂಚಿಸುತ್ತಿದ್ದಾರೆ. ಈ ಹಿಂದೆ 2016-2021 ರ ನಡುವೆಯೂ  ಬಹುಸಂಖ್ಯಾತ ಮಾದಿಗರನ್ನ ನಿರ್ಲಕ್ಷಿಸಿ ಅನ್ಯಾಯ ಎಸಗಲಾಗಿತ್ತು. ಈಗ ಆ ಕೆಟ್ಟ ಪರಂಪರೆಯನ್ನ ಶಾಸಕರು ಮುಂದುವರೆಸಿದ್ದಾರೆ ಎಂದು ಅಸಮಧಾನ ಹೊರಹಾಕಿದರು.

 

ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಶಾಸಕರಾದಾಗಿನಿಂದಲೂ ಪಪಂ. ವ್ಯಾಪ್ತಿಯ ಯಾವೊಂದು ಕಾಲೋನಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುತ್ತಿಲ್ಲ. ಕೇವಲ ಚುನಾವಣಾ ಸಮಯದಲ್ಲಿ ಮಾತ್ರ ಮಾದಿಗರು ನೆನಪಿಗೆ ಬರುತ್ತಾರೆ. ಆದರೆ ರಾಜಕೀಯ ಸ್ಥಾನಮಾನ ಕಲ್ಪಿಸುವಾಗ ಮಾತ್ರ ಮಾದಿಗ ಸಮುದಾಯವನ್ನು ಸಂಪೂರ್ಣ ಕಡೆಗಣಿಸುತ್ತಿದ್ದಾರೆ ಎಂದು ಆರೋಪಿಸಿದರು.



ಮುಖಂಡ ಟಿ.ರಮೇಶ್ ಮಾತನಾಡಿ, ವಿಧಾನಸಭಾ ಚುನಾವಣೆಯ ಮತಯಾಚನೆಯ ಸಂದರ್ಭದಲ್ಲಿ ಮಾದಿಗರ ಬಳಿ ಬಂದು ಮರುಳಿನ ಮಾತಾಡಿ ಮತ ಪಡೆದು ನಂತರ ಎಲ್ಲ ರಂಗಗಳಲ್ಲೂ ಮಾದಿಗರ ಪ್ರಾತಿನಿಧ್ಯವನ್ನ ಇಲ್ಲವಾಗಿಸುವ ಎನ್. ವೈ.ಗೋಪಾಲಕೃಷ್ಣರ ನಡೆಗೆ ಸಮುದಾಯ ಮುಂದಿನ ಬಾರಿ ತಕ್ಕ ಪಾಠ ಕಲಿಸುವ ಸನ್ನಿವೇಶವನ್ನ ಸ್ವಂಯಂ ಶಾಸಕರೇ ನಿರ್ಮಾಣ ಮಾಡುತ್ತಿದ್ದಾರೆ.

ಕಳೆದ ವಿಧಾನಸಭೆ ಮತ್ತು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ  ಪಪಂ ವ್ಯಾಪ್ತಿಯ ಪ್ರತಿ ಬೂತ್ ಗಳಲ್ಲಿಯೂ ಹೆಚ್ಚಿನ ಮತ ಕಾಂಗ್ರೆಸ್ ಪಕ್ಷಕ್ಕೆ ಬಿದ್ದಿವೆ. ಮಾದಿಗರು ನಿರ್ಣಾಯಕವಾಗಿ ಕಾಂಗ್ರೆಸ್ಸನ್ನ ಕೈ ಹಿಡಿದಿದ್ದಾರೆ. ಆದರೆ,ಶಾಸಕ ಎನ್.ವೈ.ಗೋಪಾಲಕೃಷ್ಣರು ಮಾತ್ರ ಪ್ರಾತಿನಿಧ್ಯದ ವಿಷಯ ಬಂದಾಗ ಮಾದಿಗ ಸಮುದಾಯಕ್ಕೆ ಮಣೆ ಹಾಕದಿರುವುದು

ಈ ಸಮುದಾಯವನ್ನ ರಾಜಕೀಯವಾಗಿ ಶೋಷಿಸುವ ಅವರ ಮನಸ್ಥಿತಿಯನ್ನ ಬಯಲು ಮಾಡುತ್ತಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ಮಾದಿಗ ಸಮುದಾಯದ ಮುಖಂಡರಾದ ಕರೆಬೋರಯ್ಯರ ತಿಪ್ಪೇಸ್ವಾಮಿ, ಪ್ರಕಾಶ್  ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ