ದಾವಣಗೆರೆ : ದಾವಣಗೆರೆ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಅಧಿಕಾರ ವಹಿಸಿಕೊಂಡ ಪ್ರೊ. ರಂಗಸ್ವಾಮಿ ಅವರನ್ನು ದಾವಣಗೆರೆ ವಿಶ್ವವಿದ್ಯಾನಿಲಯ ಶಿಕ್ಷಕರ ವಾಣಿಜ್ಯ ಮತ್ತು ನಿರ್ವಹಣಾ ಮಂಡಳಿ (DUTCCM) ವತಿಯಿಂದ ಆತ್ಮೀಯವಾಗಿ ಅಭಿನಂದಿಸಿ ಶುಭ ಹಾರೈಸಲಾಯಿತು.
ಈ ಸಂದರ್ಭದಲ್ಲಿ ಇಂಡಿಯನ್ ಕಾಮರ್ಸ್ ಅಸೋಸಿಯೇಷನ್ನ ರಾಷ್ಟ್ರೀಯ ಅಧ್ಯಕ್ಷರಾದ ಪ್ರೊ. ಜಯಪ್ಪ ಎಂ. ಅವರು ನೂತನ ಕುಲಪತಿಯನ್ನು ಸನ್ಮಾನಿಸಿ, ಅವರ ಆಡಳಿತದಲ್ಲಿ ವಿಶ್ವವಿದ್ಯಾನಿಲಯವು ಶೈಕ್ಷಣಿಕ, ಸಂಶೋಧನಾ ಹಾಗೂ ಆಡಳಿತಾತ್ಮಕ ಕ್ಷೇತ್ರಗಳಲ್ಲಿ ಹೊಸ ಎತ್ತರವನ್ನು ತಲುಪಲಿ ಎಂದು ಶುಭ ಕೋರಿದರು.
ಕಾರ್ಯಕ್ರಮದಲ್ಲಿ ಡಿಯುಟಿಸಿಸಿಎಂ ಅಧ್ಯಕ್ಷರಾದ ಡಾ. ವೆಂಕಟೇಶ್ ಬಾಬು ಎಸ್., ವಾಣಿಜ್ಯ ಮತ್ತು ನಿರ್ವಹಣಾ ಶಾಸ್ತ್ರ ಅಧ್ಯಾಪಕರ ವೇದಿಕೆಯ ಉಪಅಧ್ಯಕ್ಷರು, ಕಾರ್ಯದರ್ಶಿಗಳು, ಖಜಾಂಚಿಗಳು, ಪದಾಧಿಕಾರಿಗಳು ಹಾಗೂ ದಾವಣಗೆರೆ ವಿಶ್ವವಿದ್ಯಾನಿಲಯ ವ್ಯಾಪ್ತಿಯ ವಿವಿಧ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಕಾಲೇಜುಗಳ ವಾಣಿಜ್ಯ ಮತ್ತು ನಿರ್ವಹಣಾ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದು ನೂತನ ಕುಲಪತಿಗೆ ಅಭಿನಂದನೆ ಸಲ್ಲಿಸಿದರು.