LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಖಾಲಿ ಇರುವ ನಿಗಮ., ಮಂಡಳಿಗಳಿಗೆ ನಾಮ ನಿರ್ದೇಶನ ಮಾಡಿ

ಬೆಂಗಳೂರು: ಪಂಚ ಗ್ಯಾರಂಟಿಗಳ ಅನುಷ್ಠಾನದ ಮೂಲಕ ರಾಜ್ಯ ಕಾಂಗ್ರೆಸ್ ಸರ್ಕಾರ ಜನಪ್ರಿಯತೆ ಪಡೆದಿದೆ. ಕಳೆದ ಚುನಾವಣೆಯಲ್ಲಿ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮಾತಿನಂತೆ ನಡೆದುಕೊಂಡಿದ್ದಾರೆ. ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಸುಸೂತ್ರವಾಗಿ ನಡೆದಿದೆ. ಆದರೆ ಇನ್ನೂ ಸರ್ಕಾರದ ವಿವಿಧ ಇಲಾಖೆಗಳು ಮತ್ತು ನಿಗಮ, ಮಂಡಳಿಗಳಲ್ಲಿ ಸ್ಥಾನಗಳು ಖಾಲಿ ಇದ್ದು, ಪಕ್ಷಕ್ಕಾಗಿ ದುಡಿದ ಕಾರ್ಯಕರ್ತರಿಗೆ ನೇಮಿಸಿ ಇನ್ನಷ್ಟು ಸೇವೆ ಮಾಡಲು ಅವಕಾಶ ಮಾಡಿಕೊಡಬೇಕೆಂದು ಕೆಪಿಸಿಸಿ ಹಿಂದುಳಿದ ವರ್ಗಗಳ ವಿಭಾಗದ ನಿಕಟಪೂರ್ವ ರಾಜ್ಯ ಉಪಾಧ್ಯಕ್ಷರಾದ ಡಾ.ಸಿದ್ಧರಾಮ ವಾಘಮಾರೆ ಕೆಪಿಸಿಸಿ ನಾಯಕರು ಮತ್ತು ಆಡಳಿತ ನಡೆಸುವ ಪ್ರಭೃತಿಗಳಲ್ಲಿ ಮನವಿ ಮಾಡಿದ್ದಾರೆ. 

ಬೆಂಗಳೂರಿನ ವಿಧಾನಸೌಧದ ಗಾಂಧಿ ಪ್ರತಿಮೆ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್ ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಅರಣ್ಯ, ಜೀವಿಶಾಸ್ತ್ರ ಇಲಾಖೆಯ ಸಚಿವರಾದ ಈಶ್ವರ್ ಖಂಡ್ರೆ, ಗೃಹ ಸಚಿವರಾದ ಡಾ.ಜಿ.ಪರಮೇಶ್ವರ್, ಪೌರಾಡಳಿತ ಸಚಿವರಾದ ರಹೀಂ ಖಾನ್, ಮಾಜಿ ಸಚಿವರಾದ ರಾಜಶೇಖರ ವಿ.ಪಾಟೀಲ್, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವರಾದ ಪ್ರಿಯಾಂಕ್ ಖರ್ಗೆ, ಹಿಂದುಳಿದ ವರ್ಗಗಳ ಸಚಿವರಾದ ಶಿವರಾಜ್ ತಂಗಡಗಿ ಮತ್ತು ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ ಸೇರಿದಂತೆ ಹಲವು ಶಾಸಕರು ಸರ್ಕಾರಕ್ಕೆ ಈ ಕುರಿತು ಶಿಫಾರಸು ಮಾಡಿದ್ದಾರೆ.

ನಮ್ಮಂತಹ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಹಲವು ವರ್ಷಗಳಿಂದ ಪಕ್ಷಕ್ಕಾಗಿ ಅಹರ್ನಿಶಿ ದುಡಿಯುತ್ತಿದ್ದಾರೆ. ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ಕೆಲವೊಂದು ನಾಮ ನಿರ್ದೇಶನ ಸ್ಥಾನಗಳಿಗೆ ಭರ್ತಿ ಮಾಡುವಂತೆ ಕೋರಿ ಹಲವಾರು ಬಾರಿ ಪತ್ರಗಳನ್ನು ಬರೆದಿದ್ದಾರೆ. ಪಕ್ಷಕ್ಕಾಗಿ ದುಡಿದವರು ಕೆಪಿಸಿಸಿ ನಾಯಕರ ಬಳಿ ಈ ಕುರಿತು ಅಲವತ್ತುಕೊಂಡಿದ್ದಾರೆ. ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳ ಬಳಿಯೂ ಕೋರಿಕೊಂಡಿದ್ದಾರೆ. ಇಂದಲ್ಲ, ನಾಳೆ ತಮಗೆ ಅವಕಾಶ ಸಿಗಬಹುದು ಎಂದು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸರ್ಕಾರ ರಚನೆ ಆಗಿ ಎರಡು ವರ್ಷ ಕಳೆದರೂ ಇನ್ನೂ ಖಾಲಿ ಇರುವ ಸ್ಥಾನಗಳಿಗೆ ಭರ್ತಿ ಮಾಡಿರುವುದಿಲ್ಲ. ಈ ಕಾರಣಕ್ಕಾಗಿ ಕಾರ್ಯಕರ್ತರು ಬೇಸರಿಸಿಕೊಂಡಿದ್ದಾರೆ ಎಂದರು.



ಖಾಲಿ ಉಳಿದಿರುವ ಸ್ಥಾನಗಳಿಗೆ ಕಾರ್ಯಕರ್ತರನ್ನು ನೇಮಕ ಮಾಡಿದರೆ ಪಕ್ಷಕ್ಕಾಗಿ ದುಡಿಯಲು ಇನ್ನಷ್ಟು ಹುಮ್ಮಸ್ಸು ಬರುತ್ತದೆ. ಮುಂದಿನ ಚುನಾವಣೆ ವೇಳೆಗೆ ಪಕ್ಷವನ್ನು ಸಂಘಟಿಸಲು ಆನೆ ಬಲ ಬಂದಂತಾಗುತ್ತದೆ. ಪಕ್ಷದ ನಾಯಕರು ಮತ್ತು ಸರ್ಕಾರ ನಡೆಸುವ ಆಡಳಿತಗಾರರು ಕಾರ್ಯಕರ್ತರಿಗೆ ನಿರಾಶೆಗೊಳಿಸದೇ ಅವಕಾಶ ಮಾಡಿಕೊಡಬೇಕು. ಅಲೆಮಾರಿ ನಿಗಮದ ಅಧ್ಯಕ್ಷ ಸ್ಥಾನ ಮತ್ತು ಆಯೋಗದ ಸ್ಥಾನವೂ ಖಾಲಿ ಇವೆ. ಹಲವಾರು ನಿಗಮ, ಮಂಡಳಿಗಳು ಮತ್ತು ಇಲಾಖೆಗಳ ನಿರ್ದೇಶಕರ ಸ್ಥಾನಗಳು ಖಾಲಿ ಇದ್ದು ಸರ್ಕಾರದಿಂದ ನಾಮ ನಿರ್ದೇಶನ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ. 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ