LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ

ಯಾರದ್ದೋ ಹೇಳಿಕೆ ಮೇಲೆ ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ, ಇದನ್ನು ವೈಭವೀಕರಿಸುವ ಅಗತ್ಯವಿಲ್ಲ : ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು :  “ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು.

ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ” ಎಂದು ತಿಳಿಸಿದರು.



ಶಾಸಕ ಬಿ.ಆರ್ ಪಾಟೀಲ್ ಅವರು ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮ ಪಂಚಾಯ್ತಿ ಸದಸ್ಯರು ಕೂಡ ಅಧಿಕಾರಿಗಳು ಹಣ ಪಡೆದಿದ್ದಾರೆ ಎಂಬ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಈ ವಿಚಾರವಾಗಿ ಏನು ಹೇಳಬೇಕೋ ಹೇಳಿದ್ದೇನೆ.  ಉಳಿದಂತೆ ಈ ವಿಚಾರವಾಗಿ ಮುಖ್ಯಮಂತ್ರಿಗಳು ಹಾಗೂ ವಸತಿ ಸಚಿವರು ಸ್ಪಷ್ಟನೆ ನೀಡುತ್ತಾರೆ” ಎಂದು ಹೇಳಿದರು.

ಶಾಸಕರ ಗಮನಕ್ಕೆ ಬಾರದೇ ಅನುದಾನ ತೆಗೆದುಕೊಂಡು ಹೋಗಲಾಗುತ್ತಿದೆ ಎಂಬ ಆರೋಪದ ಬಗ್ಗೆ ಕೇಳಿದಾಗ, “ಈ ವಿಚಾರವಾಗಿ ಯಾರು ಏನು ಹೇಳಿದ್ದಾರೆ ಎಂದು ನನಗೆ ಮಾಹಿತಿ ಇಲ್ಲ” ಎಂದು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ