LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಇಸ್ಲಾಂ ಧರ್ಮಕ್ಕೆ ಮತಾಂತರದ ವಿರುದ್ಧ ಪೋಷಕರಿಂದ ಸಿಎಂಗೆ ದೂರು

ಬೆಂಗಳೂರು: ಥಣಿಸಂದ್ರದಲ್ಲಿರುವ ಜಾಮಿಯಾ ಮೊಹಮ್ಮದೀಯ ಮನ್ಸೂರ ಎಂಬ ಸಂಸ್ಥೆ ನಡೆಸುತ್ತಿರುವ ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆ ಸಮಾಜ, ದೇಶದ ಏಕತೆ, ಭದ್ರತೆಗೆ ಧಕ್ಕೆ ತರುವಂತಿದ್ದು, ಈ ಬಗ್ಗೆ ತಕ್ಷಣವೇ ಕ್ರಮ ತೆಗೆದುಕೊಳ್ಳುವಂತೆ ಇಲ್ಲಿ ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿ ತಂದೆಯೊಬ್ಬರು ಸರ್ಕಾರಕ್ಕೆ ಲಿಖಿತವಾಗಿ ದೂರು ಸಲ್ಲಿಸಿದ್ದಾರೆ.

 

ವಿದ್ಯಾರ್ಥಿಯ ತಂದೆ, ಎಚ್.ಬಿ.ಆರ್. ಬಡಾವಣೆಯ ಅಬ್ದುಲ್ ರಹೀಮ್  ಎಂಬುವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವ ಡಾ. ಪರಮೇಶ್ವರ್, ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್, ಪೊಲೀಸ್ ಆಯುಕ್ತರು, ಕೊತ್ತನೂರು ಪೊಲೀಸ್ ಠಾಣೆ, ಶಾಲಾ ಶಿಕ್ಷಣ ಆಯುಕ್ತರು ಮತ್ತಿತರರ ಬಳಿ ದೂರು ದಾಖಲಿಸಿದ್ದಾರೆ.

 

ನನ್ನ ಮಗ ಮೂರು ವರ್ಷಗಳಿಂದ ಇಲ್ಲಿ ಶಿಕ್ಷಣ ಪಡೆಯುತ್ತಿದ್ದು, ನನ್ನ ಮಗನಿಗೆ ನೀಡಿದ ಮೂರು ಅಂಕಪಟ್ಟಿಗಳು, ಶಾಲಾ ಶುಲ್ಕ ರಸೀದಿಗಳು ಕೂಡ ನಕಲಿ. ಇಲ್ಲಿ ದೇಶ ದ್ರೋಹ ಚಟುವಟಿಕೆ ಜೊತೆಗೆ ಮತಾಂತರವೂ ನಿರಂತರವಾಗಿ ನಡೆಯುತ್ತಿದೆ. ಈ ಶಿಕ್ಷಣ ಸಂಸ್ಥೆ ಅನಧಿಕೃತವಾಗಿದ್ದು, ಜೊತೆಗೆ ನೋಂದಣಿಯಾಗದ ಮದರಸ ಇಲ್ಲಿ ಕಾರ್ಯನಿರ್ವಹಿಸುತ್ತಿದೆ. ಇಲ್ಲಿ ಊಹಿಸಲೂ ಸಾಧ್ಯವಾಗದ ಹಾಗೂ ವಿವರಿಸುವುದಕ್ಕೂ ಆಗದ ಅಕ್ರಮ ಕಾನೂನು ಬಾಹಿರ ಚಟುವಟಿಕೆಗಳು ನಡೆಯುತ್ತಿವೆ ಎಂದಿದ್ದಾರೆ.

 

2019 ರ ನವೆಂಬರ್ 24 ರಂದು ಇಲ್ಲಿನ ಮದರಸಾದಲ್ಲಿ ನಡೆದ ಸಮಾವೇಶದಲ್ಲಿ ಇಲ್ಲಿನ ಧರ್ಮಗುರುಗಳು, ಮುಸ್ಲಿಮರು ಒಂದು ಸಾವಿರ ವರ್ಷ ಭಾರತವನ್ನು ಆಳಿದ್ದು, ನಾವೀಗ ಮತ್ತೆ ಈ ದೇಶವನ್ನು ಆಳ್ವಿಕೆ ಮಾಡಬೇಕು ಎಂಬುದು ಸೇರಿದಂತೆ ದೇಶದ ಏಕತೆಗೆ ಧಕ್ಕೆ ತರುವ ರೀತಿಯಲ್ಲಿ ಪ್ರಚೋದನಾಕಾರಿಯಾಗಿ ಮಾತನಾಡಿದ್ದಾರೆ. ಈ ಕುರಿತಾದ ಪ್ರಚೋದಿಸುವ ಹೇಳಿಕೆ ಯೂಟ್ಯೂಬ್ ನಲ್ಲಿ ಈಗಲೂ ಲಭ್ಯವಿದೆ.

 

ಇದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ಮಾಲೆಗಾಂವ್ ನಲ್ಲಿರುವ ಜಾಮಿಯಾ ಮಹಮ್ಮದೀಯ ಮನ್ಸೂರ ಶಾಲೆಯಲ್ಲಿ ಮುಖ್ಯ ಶಿಕ್ಷಕಿಯಾಗಿದ್ದ ನಾಜಿಯ ಅನ್ಸಾರಿ ಎಂಬುವರು 2023 ರ ಫೆಬ್ರವರಿ 7 ರಂದು ಸಾಮರ್ ಇಂಟರ್ ನ್ಯಾಷನಲ್ ಇಸ್ಲಾಮಿಕ್ ಶಾಲೆಗೆ  ಈ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ಆಕೆ ಬೇರೆ ಧರ್ಮದವರನ್ನು ವರಿಸಿದ್ದರು. ಆಗ ಈ ಸಮಾವೇಶದಲ್ಲಿ ಈಕೆಯ ಪತಿಯನ್ನು ಬಲವಂತಾಗಿ ಇಸ್ಲಾಂ ಧರ್ಮಕ್ಕೆ ಮತಾಂತರ ಮಾಡಿದ್ದರು. ಈ ಬಗ್ಗೆ ಮಹಾರಾಷ್ಟ್ರ ಶಿಕ್ಷಣ ಸಂಸ್ಥೆಗೆ ದೂರು ಸಲ್ಲಿಸಿದ ಕಾರಣದಿಂದ ಈಕೆಯನ್ನು ಕೆಲಸದಿಂದ ತೆಗೆಯಲಾಗಿತ್ತು ಎಂದು ಅಬ್ದುಲ್ ರಹೀಮ್ ಆಪಾದಿಸಿದ್ದಾರೆ.



ಧಾರ್ಮಿಕ ಬೋಧನೆ ಹೆಸರಿನಲ್ಲಿ ಮತಾಂತರ ಮಾಡುತ್ತಿದೆ. ಮಹಾರಾಷ್ಟ್ರದ ಅರ್ಷದ್ ಮೊಖ್ತಾರ್, ಅವರ ಪುತ್ರ ರಾಶಿದ್ ಅರ್ಷದ್ ಮೊಖ್ತಾರ್, ಬೆಂಗಳೂರಿನಲ್ಲಿ ಉಸ್ತುವಾರಿ ಖಾಲಿದ್ ಮುಷರ್ರಫ್ ಇದಕ್ಕೆಲ್ಲಾ ಕಾರಣವಾಗಿದ್ದು, ಇವರ ಮೇಲೆ ತಕ್ಷಣವೇ ಕ್ರಮ ತೆಗೆದುಕೊಳ್ಳಬೇಕು. ಈ ಬಗ್ಗೆ ತನಿಖೆ ನಡೆದರೆ ಈ ಬಗ್ಗೆ ತನಿಖೆ ನಡೆದರೆ ಸೂಕ್ತ ಪುರಾವೆಗಳನ್ನು ಒದಗಿಸುವುದಾಗಿ ಅವರು ತಿಳಿಸಿದ್ದಾರೆ.

 

ಕಾಶ್ಮೀರದಿಂದ ಬಂದಿದ್ದ ವಿದ್ಯಾರ್ಥಿಯೊಬ್ಬ 2024 ರ ಏಪ್ರಿಲ್ 25 ರಂದು ಕೊತ್ತನೂರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದು, ಇಲ್ಲಿ ವಿವಿಧ ರೀತಿಯ ರಾಷ್ಟ್ರ ವಿರೋಧಿ ಚಟುವಟಿಕೆ ನಡೆಯುತ್ತಿದೆ ಎಂದು ಗಂಭೀರವಾಗಿ ಆಪಾದಿಸಿದ್ದ. ಇದು ಸಂಪೂರ್ಣವಾಗಿ ಅನಧಿಕೃತ ಸಂಸ್ಥೆಯಾಗಿದ್ದು, ಇದು ದೇಶಕ್ಕೆ ಅಪಾಯಕಾರಿಯಾಗಿದೆ. ಹಾಗಾಗಿ ತಕ್ಷಣವೇ ಸೂಕ್ತ ತನಿಖೆ ನಡೆಸಿ ಕ್ರಮ ಜರುಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ