LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಬೈಕ್ ಗೆ ಟಚ್ ಆಗಿದ್ದಕ್ಕೆ ಸಾರಿಗೆ ಬಸ್ ಚಾಲಕನಿಗೆ ಚಪ್ಪಲಿಯಿಂದ ಹಲ್ಲೆ ನಡೆಸಿದ ಪೊಲೀಸ್

ಕೂಡ್ಲಿಗಿ: ಓವರ್ ಟೇಕ್ ಮಾಡುವಾಗ ಬೈಕ್ ಗೆ ಟಚ್ ಆಗಿದೆ ಎಂದು ಆರೋಪಿಸಿ ಪೋಲಿಸ್  ಓರ್ವ ಕರ್ತವ್ಯ ನಿರತ ಸಾರಿಗೆ ಬಸ್ ಚಾಲಕನ ಮೇಲೆ ಚಪ್ಪಲಿ, ಹೆಲ್ಮೆಟ್ ನಿಂದ ಹಲ್ಲೆ ನಡೆಸಿರುವ ಘಟನೆ ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ನಡೆದಿದೆ.

 

ಹರಿಹರ ಘಟಕಕ್ಕೆ ಸೇರಿದ ಸಾರಿಗೆ ಬಸ್ ಬಳ್ಳಾರಿಗೆ ಹೋಗುತ್ತಿತ್ತು. ಕೊಟ್ಟೂರಿನಿಂದ ಕೂಡ್ಲಿಗಿಗೆ ಬರುವ ರಸ್ತೆಯಲ್ಲಿನ ಮಲ್ಲನಾಯಕಹಳ್ಳಿ ಬಳಿ ಬಸ್ ಚಾಲಕ ರಾಮಲಿಂಗಪ್ಪ ಕೂಡ್ಲಿಗಿ ಠಾಣೆಯ ಹೆಡ್ ಕಾನ್‌ಸ್ಟೆಬಲ್ ಮಂಜುನಾಥ ಹಾಗೂ ಇನ್ನೊಬ್ಬ ಕಾನ್‌ಸ್ಟೆಬಲ್ ಇದ್ದ ಬೈಕ್‌ನ್ನು ಹಿಂದಿಕ್ಕಿದ್ದಾರೆ. ಇನ್ನೇನು ಬೈಕ್ ಅನ್ನು ಹಿಂದಿಕ್ಕಬೇಕು ಅನ್ನುವಷ್ಟರಲ್ಲಿ ಎದುರಿನಿಂದ ಕಾರೊಂದು ಬಂದಿದೆ. ಕೂಡಲೇ ಎಚ್ಚೆತ್ತ ಸಾರಿಗೆ ಚಾಲಕ ರಾಮಲಿಂಗಪ್ಪ ಬಸ್ ಅನ್ನು ಎಡಕ್ಕೆ ಎಳೆದುಕೊಂಡಿದ್ದಾರೆ. ಈ ವೇಳೆ ಬಸ್ ನ ಹಿಂಭಾಗ ಬೈಕ್ ನ ಹ್ಯಾಂಡಲ್ ಗೆ ಚೂರು ಟಚ್ ಆಗಿದೆ.



ಈ ವೇಳೆ ಏನಾಯ್ತು ಎಂದು ಚಾಲಕ ಮಿರರ್ ಮೂಲಕ ವೀಕ್ಷಿಸಿದ್ದಾರೆ, ಆದರೆ ಏನು ಕಾಣದ ಹಿನ್ನಲೆ ಮುಂದೆ ಸಾಗಿದ್ದಾರೆ. ಇದರಿಂದ ಸಿಟ್ಟಾದ ಕೂಡ್ಲಿಗಿ ಪೊಲೀಸ್ ಠಾಣೆಯ ಹೆಡ್ ಕಾನ್ಸ್ ಸ್ಟೇಬಲ್ ಮಂಜುನಾಥ್ ಗಜಾಪೂರ ಬಳಿ ಬಸ್ ಅನ್ನು ನಿಲ್ಲಿಸಿದ್ದಾರೆ. ಬಳಿಕ ಬಸ್ ಒಳಗೆ ಬಂದ ಮಂಜುನಾಥ್ ಏನನ್ನು ಪ್ರಶ್ನೆ ಮಾಡದೆ ಅವಾಚ್ಯ ಶಬ್ದದಿಂದ ನಿಂದಿಸಿದ್ದಾನೆ, ಅಲ್ಲದೇ ಕಾಲಿನಲ್ಲಿದ್ದ ಚಪ್ಪಲಿ ತೆಗೆದು ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಜೊತೆಗೆ ಚಾಲಕನ ಜೇಬಿನಲ್ಲಿದ್ದ ಮೊಬೈಲ್ ಅನ್ನು ಕಿತ್ತುಕೊಂಡು ಸ್ಟೇಷನ್ ಗೆ ಬಾ ಎಂದು ಹೇಳಿ ಬಸ್ ನಿಂದ ಇಳಿದು ಹೋಗಿದ್ದಾನೆ.

 

ನಂತರ ಬಸ್ಸಿನಿಂದ ಇಳಿದು ನಾನೇನು ತಪ್ಪು ಮಾಡಿಲ್ಲ. ದಯವಿಟ್ಟು ಮೊಬೈಲ್ ನೀಡುವಂತೆ ರಾಮಲಿಂಗಪ್ಪ ಕೇಳಿದ್ದಾರೆ. ಇದರಿಂದ ಮತ್ತಷ್ಟು ಕೆರಳಿದ ಮಂಜುನಾಥ ತನ್ನ ಕೈಯಲ್ಲಿದ್ದ ಹೆಲೈಟ್ ನಿಂದ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾನೆ. ಇನ್ನು ಈ ಘಟನೆಗೆ ಸಂಬAಧಪಟ್ಟAತೆ ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹೆಡ್ ಕಾನ್ಸ್ ಸ್ಟೇಬಲ್ ಮಂಜುನಾಥ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ವರದಿಯ ಪ್ರಕಾರ, ಮಂಜುನಾಥ್ ಕರ್ತವ್ಯದಲ್ಲಿ ಇರಲಿಲ್ಲ, ಹೀಗಿರುವ ಕರ್ತವ್ಯ ನಿರತ ಅಧಿಕಾರಿಯ ಮೇಲೆ ಹಲ್ಲೆ ನಡೆಸಿರುವ ಬಗ್ಗೆ ಸಾರ್ವಜನಿಕರು ಕಿಡಿಕಾರಿದ್ದಾರೆ.

 

ಸದ್ಯ ಕರ್ತವ್ಯ ನಿರತ ಸಿಬ್ಬಂದಿಯ ಮೇಲೆ ಹಲ್ಲೆ ಮಾಡುವುದು ಕಾನೂನು ಬಾಹಿರ ಎಂದು ತಿಳಿದಿದ್ದರೂ ಕೂಡ ಹಲ್ಲೆ ನಡೆಸಿರುವುದು ಖಂಡನೀಯ, ಈ ಕೂಡಲೇ ಪೊಲೀಸ್ ಅಧಿಕಾರಿಗಳು ಆರೋಪಿಯನ್ನು ಬಂಧಿಸಿ ಕೆಲಸದಿಂದ ವಜಾ ಮಾಡಬೇಕು ಎಂದು ಸಾರಿಗೆ ನೌಕರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ