ಮರಿಯಮ್ಮನಹಳ್ಳಿ : ವಿಜಯನಗರ ಜಿಲ್ಲೆ ಹೊಸಪೇಟೆ ತಾಲೂಕಿನ ಕಮಲಾಪುರದ ಹೆಚ್.ಪಿ.ಸಿ ಕಿರಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ನಡೆದ ತಾಲೂಕು ಮಟ್ಟದ ಪ್ರಾಥಮಿಕ ಶಾಲಾ ಮಕ್ಕಳ ಕ್ರೀಡಾಕೂಟದಲ್ಲಿ ಮರಿಯಮ್ಮನಹಳ್ಳಿ ವಲಯದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಪೋತಲಕಟ್ಟಿ ವಿದ್ಯಾರ್ಥಿಗಳು ಬಾಲಕರ ಥ್ರೋ ಬಾಲ್ ಪಂದ್ಯಾವಳಿಯಲ್ಲಿ ಅಂತಿಮ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡುವ ಮೂಲಕ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಗ್ರಾಮೀಣ ಭಾಗದ ಈ ವಿದ್ಯಾರ್ಥಿಗಳ ಸಾಧನೆಗೆ ಹೊಸಪೇಟೆ ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಬಿ.ಉಮಾಪತಿ ಹಾಗೂ ದೈಹಿಕ ಶಿಕ್ಷಣ ಪರಿವೀಕ್ಷಕರಾದ ಶ್ರೀಕಾಂತ ವಾಲ್ಮೀಕಿ, ಮರಿಯಮ್ಮನಹಳ್ಳಿ ವಲಯದ ಶಿಕ್ಷಣ ಸಂಯೋಜ ರಾಜು.ಎಂ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಕೆ.ಮಾರಗದಪ್ಪ, ಕೆ.ಕುಮಾರಸ್ವಾಮಿ ಹಾಗೂ ದೈಹಿಕ ಶಿಕ್ಷಕರ ಸಂಘದ ಜಾಕೀರ್ ಹುಸೇನ್ ಹಾಗೂ ನಿಸಾರ್ ಅಹಮದ್, ಸೋಮಕ್ಕ, ಎಲ್. ವಿಜಯಕುಮಾರಿ ರೆಹಮಾನ್ ಎಂ. ಷಡಕ್ಷರಿ , ಜಗದೀಶ್, ಹಾಗೂ ಪೋತಲಕಟ್ಟಿ ಶಾಲೆಯ ಎಸ್. ಡಿ.ಎಂ.ಸಿ ಅಧ್ಯಕ್ಷರು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಹಾಗೂ ಗ್ರಾಮದ ಮುಖಂಡರು ಹಾಗೂ ನಾಗರೀಕರು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಮುಖ್ಯ ಗುರುಗಳು ಹಾಗೂ ಸಹ ಶಿಕ್ಷಕರು ಅಭಿನಂದನೆಗಳು ಸಲ್ಲಿಸಿ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ಜಿಲ್ಲೆಗೆ ಕೀರ್ತಿ ತನ್ನಿ ಎಂದು ಶುಭಾಶಯಗಳು ಕೋರಿದ್ದಾರೆ