LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ರೈತ ಸಮಿತಿಯಿಂದ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ

ದೇವನಹಳ್ಳಿ ಸುತ್ತಮುತ್ತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ಗೆ ಭೂಮಿ ಕೊಡುವ ರೈತರಿಗೆ ನ್ಯಾಯಯುತ ಮಾರುಕಟ್ಟೆ ದರ ನೀಡುವಂತೆ ಒತ್ತಾಯ

ಬೆಂಗಳೂರು:  ದೇವನಹಳ್ಳಿ ಸುತ್ತಮುತ್ತ ಹೈಟೆಕ್ ಡಿಫೆನ್ಸ್ ಮತ್ತು ಏರೋಸ್ಪೇಸ್ ಪಾರ್ಕ್ ನಿರ್ಮಾಣಕ್ಕೆ ಭೂಮಿ ಕೊಡುವ ರೈತರಿಗೆ ನ್ಯಾಯಯುತ ಮಾರುಕಟ್ಟೆ ದರ ನಿಗದಿಮಾಡುವಂತೆ ದೇವನಹಳ್ಳಿ ಚನ್ನರಾಯಪಟ್ಟಣ ರೈತ ಸಮಿತಿಯಿಂದ ಬೆಂಗಳೂರಿ ಫೀಡಂ ಪಾರ್ಕ್ ನಲ್ಲಿಂದು ಬೃಹತ್ ಪ್ರತಿಭಟನೆ ನಡೆಯಿತು.



 ಕೆ.ಐ.ಎ.ಡಿ.ಬಿ.ಉದ್ದೇಶಿಸಿರುವ ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಬಳಿ ಕೈಗಾರಿಕಾ ಅಭಿವೃದ್ದಿಗಾಗಿ ಭೂಸ್ವಾಧೀನಪಡಿಸಿಕೊಂಡರೆ ರೈತರ ಭೂಮಿಗೆ ಹೆಚ್ಚು ಪರಿಹಾರ ಮತ್ತು ರೈತರ ಮಕ್ಕಳಿಗೆ ಸರ್ಕಾರಿ ಉದ್ಯೋಗ ನೀಡುವಂತೆ ಒತ್ತಾಯಿಸಿ ನೂರಾರು ರೈತರಿಂದ ಪ್ರತಿಭಟನೆ ನಡೆಸಿದರು.

ಸಮಿತಿ ಸಂಚಾಲಕರುಗಳಾದ ಶ್ರೀನಿವಾಸ್, ಪ್ರಕಾಶ್ ಡೊಡ್ಡೇಗೌಡ, ರಂಗಣ್ಣ, ಜಗದೀಶ್, ಭರತ್, ದೇವರಾಜ್ ರವರ ಜೊತೆಯಲ್ಲಿ ನೂರಾರು ರೈತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

ಇದೇ ಸಂದರ್ಭದಲ್ಲಿ ಸಂಚಾಲಕರಾದ ಶ್ರೀನಿವಾಸ್ ಮಾತನಾಡಿ, ಅಭಿವೃದ್ದಿ ಹೆಸರಿನಲ್ಲಿ ಕೆಐಎಡಿಬಿ ರೈತನ ಜಮೀನು ವಶಕ್ಕೆ ಪಡೆಯುವ ಬಗ್ಗೆ ತಕರಾರಿಲ್ಲ.  ಆದರೆ ರೈತರಿಗೆ ಪರ್ಯಾಯ ಜಮೀನು ನೀಡುವುದು ಅಥವಾ ಉತ್ತಮ ಬೆಲೆ ನಿಗದಿ ಹಾಗೂ ಸರ್ಕಾರಿ ಉದ್ಯೋಗ ಅಥವಾ ರೈತನ ಜಮೀನಿನಲ್ಲಿ ನಿರ್ಮಾಣವಾದ ಕಾರ್ಖಾನೆ, ಸಂಸ್ಥೆಯಲ್ಲಿ ಜಮೀನು ಕಳೆದುಕೊಂಡವರಿಗೆ ಉದ್ಯೋಗ ನೀಡುವ ಕೆಲಸ ಮಾಡಿದರೆ ಮಾತ್ರ ಸಹಕಾರ ನೀಡುತ್ತೇವೆ. ಇಲ್ಲದೆ ಹೋದರೆ ಸರ್ಕಾರದ ವಿರುದ್ದ ನಿರಂತರ ಹೋರಾಟ ಮಾಡುತ್ತೇವೆ ಎಂದರು.



ನಮಗೆ ಸರ್ಕಾರಕ್ಕೆ ಭೂಮಿ ಕೊಡಲು ಯಾವುದೇ ಅಕ್ಷೇಪಣೆ ಇಲ್ಲ. ಆದರೆ ಹೆಚ್ಚಿನ ಪರಿಹಾರದ ಬೇಡಿಕೆ ಇದೆ. ಮಕ್ಕಳಗೆ ಉದ್ಯೋಗ ಅವಕಾಶ ಬೇಕಾಗಿದೆ.  ದೇವನಹಳ್ಳಿ ಭಾಗವನ್ನು ಹಸಿರು ವಲಯ ಎಂದು ಘೋಷಿಸಬಾರದು. ನಮಗೆ ವ್ಯವಸಾಯ ಮಾಡಲು ನೀರಿನ ಕೊರತೆ ಇದೆ. 1600 ಅಡಿ ಕೊರೆಸಿದರೂ ನೀರು ಸಿಗುವುದಿಲ್ಲ  ಎಂದು ಹೇಳಿದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ