ಕೋಲಾರ: ಕೋಲಾರ ತಾಲೂಕಿನ ಅರಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಹೂಹಳ್ಳಿ ಗ್ರಾಮದ ನಿವಾಸಿ ಶ್ರೀಮತಿ ವೆಂಕಟಲಕ್ಷ್ಮಮ್ಮ ಮತ್ತು ದಿವಂಗತ ಮುನಿರಾಜು ದಂಪತಿಯ ಏಕೈಕ ಪುತ್ರ, ಹಾಲಿ ಬೆಂಗಳೂರು ವಿಶ್ವವಿದ್ಯಾಲಯ ಸಮಾಜಶಾಸ್ತ್ರ ವಿಭಾಗದ ಸಂಶೋಧನಾರ್ಥಿ ರಾಮಾಂಜನೇಯ ಎಂ ಅವರಿಗೆ ಪಿಎಚ್.ಡಿ ಪದವಿ ಲಭಿಸಿದೆ.
ವಿಶ್ವವಿದ್ಯಾಲಯದ ಸಮಾಜಶಾಸ್ತ್ರ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ.ವೆಂಕಟರಮಣಪ್ಪ ರವರ ಮಾರ್ಗದರ್ಶನದಲ್ಲಿ ಮಂಡಿಸಿದ "ಅಂತರ್ಜಾತಿ ವಿವಾಹಗಳ ಸಮಸ್ಯೆಗಳು ಮತ್ತು ನಿರೀಕ್ಷಣೆಗಳ ಕುರಿತಾದ ಸಮಾಜಶಾಸ್ತ್ರೀಯ ಅಧ್ಯಯನ" (ವಿಶೇಷವಾಗಿ ಕೋಲಾರ ಜಿಲ್ಲೆಯನ್ನು ಅನುಲಕ್ಷಿಸಿ) ಎಂಬ ಸಂಶೋಧನಾ ಮಹಾಪ್ರಬಂಧ ಮಂಡಿಸಿದ್ದಕ್ಕಾಗಿ ಬೆಂಗಳೂರು ವಿಶ್ವವಿದ್ಯಾಲಯವು ಡಾಕ್ಟರೇಟ್ ಪದವಿ ಪ್ರದಾನ ಮಾಡಿದೆ ಎಂದು ವಿವಿ ಪ್ರಕಟಣೆಯಲ್ಲಿ ತಿಳಿಸಿದೆ.