LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ನಾವಿಬ್ಬರೂ ಒಂದಾಗಲಿದ್ದೇವೆ - ರೆಡ್ಡಿ

ಬಳ್ಳಾರಿ: ನಾವಿಬ್ಬರೂ ಎರಡು ದೇಹ, ಒಂದೇ ಆತ್ಮ ಇದ್ದಂತೆ. ಸಣ್ಣ ಕಾರಣಕ್ಕೆ ಏನೋ ಆಗಿ ಹೋಗಿದೆ. ಶ್ರೀರಾಮುಲು ಜೊತೆಗೆ ಇಬ್ಬರೂ ಒಟ್ಟಿಗೆ ಕುಳಿತು ಸಿನೇಮಾ ನೋಡುತ್ತೇವೆ ಎಂದು ಗಂಗಾವತಿ ಶಾಸಕ ಜಿ.ಜನಾರ್ಧನರೆಡ್ಡಿ ತಮ್ಮ ಸ್ನೇಹಿತ ರಾಮುಲು ಕುರಿತು ಹೇಳಿದರು.

 

ತಮ್ಮ ಏಕೈಕ ಪುತ್ರ ಕಿರೀಟಿ ಅಭಿನಯಿಸಿದ ಜೂನಿಯರ್ ಚಿತ್ರ ವೀಕ್ಷಣೆ ಬಳಿಕ ತಮ್ಮನ್ನು ಭೇಟಿಯಾದ ಸುದ್ದಿಗಾರರನ್ನುದ್ದೇಶಿಸಿ ಮಾತನಾಡುತ್ತ, ನನ್ನ ಮತ್ತು ರಾಮುಲು ನಡುವಿನ ಸ್ನೇಹ ಹದಿನೈದನೇ ವಯಸ್ಸಿನಿಂದ ಇರುವಂಥದ್ದು. ನಲವತ್ತು ವರ್ಷಗಳಿಂದ ಜೊತೆಗಿದ್ದೇವೆ. ಶೀಘ್ರದಲ್ಲಿ ಇಬ್ಬರೂ ಜೂನಿಯರ್ ಸಿನಿಮಾ ನೋಡುತ್ತೇವೆ. ನಾಲ್ಕು ದಶಕಗಳಷ್ಟು ಹಳೆಯ ಸ್ನೇಹ ಯಾವುದೋ ಒಂದು ಘಟನೆಯಿಂದ ಬದಲಾವಣೆ ಆಗಲ್ಲ ಎಂದು ಹೇಳಿದರು.



ತಮ್ಮ ಮತ್ತೊಬ್ಬ ಅಣ್ಣ ಜಿ.ಸೋಮಶೇಖರ್ ರೆಡ್ಡಿ, ಪತ್ನಿ ಲಕ್ಷಿö್ಮÃ ಅರಣಾ, ಪುತ್ರಿ ಬ್ರಹ್ಮಿಣಿ, ಪುತ್ರ ಕಿರೀಟಿ ಸೇರಿದಂತೆ ಕುಟುಂಬ ಸಮೇತರಾಗಿ ಜೂನಿಯರ್ ಸಿನಿಮಾವನ್ನು ವೀಕ್ಷಿಸಿದ ಅವರು, ಸಿನೇಮಾ ಸಖತ್ ಆಗಿದೆ, ಚಿತ್ರದಲ್ಲಿ ಎಲ್ಲವೂ ಅದ್ಭುತವಾಗಿ ಮೂಡಿಬಂದಿವೆ. ಚಿತ್ರ ಯಶಸ್ಸು ಗಳಿಸುತ್ತದೆ. ಚಿಕ್ಕಂದಿನಿAದ ಪುನೀತ್ ರಾಜಕುಮಾರ್, ಎನ್‌ಟಿಆರ್ ಅವರನ್ನು ನೋಡುತ್ತಾ ಬೆಳೆದಿರುವ ಕಿರೀಟಿ, ಅವರಿಂದ ಪ್ರೇರಣೆಯಾಗಿ ಇಂದು ಈ ಮಟ್ಟಕ್ಕೆ ಬೆಳೆದಿದ್ದಾನೆ. ಮನೆಯಲ್ಲಿ ರಾಜಕೀಯ ಇದ್ದರೂ ಕೂಡ ಅವನಿಗೆ ರಾಜಕೀಯ ಬಗ್ಗೆ ಆಸಕ್ತಿಯೇ ಇರಲ್ಲಿಲ್ಲ, ಸಿನಿಮಾ ಕಡೆಗೆ ಅವನ ಒಲವು ಹೆಚ್ಚಾಗಿತ್ತು. ಆ ಸಿನಿಮಾ ಹುಚ್ಚು ಅವನನ್ನು ಇಲ್ಲಿಯವರೆಗೆ ತಂದಿದೆ ಎಂದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ