ಬಳ್ಳಾರಿ : ಬಳ್ಳಾರಿ ನಗರದ ಹಾವಂಭಾವಿ ಪ್ರದೇಶದಲ್ಲಿರುವ ಬಳ್ಳಾರಿ ನಗರವನ್ನು ಸಪರ್ಕಿಸುವ ಸಿರುಗುಪ್ಪ ರಸ್ತೆಯ ಸೇತುವೆಯನ್ನು ಶಾಸಕ ನಾರಾ ಭರತ್ ರೆಡ್ಡಿ ರವಿವಾರ ಉದ್ಘಾಟಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಅಂದಾಜು 1.05 ಕೋಟಿ ರೂ.ಗಳ ವೆಚ್ಚದಲ್ಲಿ ಸೇತುವೆ ಕಾಮಗಾರಿಯನ್ನು ಪೂರ್ಣಗೊಳಿಸಲಾಗಿದೆ.
ಕೇವಲ 2 ತಿಂಗಳ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಿದ ಗುತ್ತಿಗೆದಾರರಿಗೆ ಶಾಸಕರು ಅಭಿನಂಧಿಸಿದರು.

ಈ ಸಂದರ್ಭ ಪಾಲಿಕೆಯ ಸದಸ್ಯೆ, ಮಾಜಿ ಮೇಯರ್ ಎಂ.ರಾಜೇಶ್ವರಿ, ಪಾಲಿಕೆಯ ಸದಸ್ಯರಾದ ನೂರ್ ಮೊಹಮ್ಮದ್, ಕಾಂಗ್ರೆಸ್ ಮುಖಂಡರಾದ ಸುಬ್ಬರಾಯುಡು, ಪರಶುರಾಮುಡು, ಹೊನ್ನಪ್ಪ, ಹಗರಿ ಗೋವಿಂದ, ಹಾವಂಭಾವಿ ಲೋಕೇಶ್, ಗಂಗಾಧರ್, ದೇವಿನಗರ ಹೊನ್ನೂರಪ್ಪ, ಬಿಆರೆಲ್ ಸೀನಾ, ಮಹೇಂದ್ರ ಮತ್ತಿತರರು ಹಾಜರಿದ್ದರು.