LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಶ್ರೀ ಗುರುಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ವಿಶೇಷ ಮಕರ ಸಂಕ್ರಾಂತಿ ಆಚರಣೆ

ಬೆಂಗಳೂರು :  ಶ್ರೀ ಗುರುಲಿಂಗೇಶ್ವರ್ ಟ್ರಸ್ಟ್ ನಿಂದ ಶ್ರೀ ಜ್ಞಾನಾಂಬಿಕಾ ಸಮೇತ ಗುರುಲಿಂಗೇಶ್ವರ ಸ್ವಾಮಿ ದೇವಾಲಯದಲ್ಲಿ ಮಕರ ಸಂಕ್ರಾಂತಿ ಹಬ್ಬವನ್ನು ಅದ್ದೂರಿ ಮತ್ತು ವೈಭವಯುತವಾಗಿ  ಆಚರಿಸಲಾಯಿತು. ಈ ಬಾರಿ ಸಂಕ್ರಾಂತಿ ವಿಶೇಷವಾಗಿ, 1 ಲಕ್ಷಕ್ಕೂ ಹೆಚ್ಚು ಕಬ್ಬಿನ ಕಡ್ಡಿಗಳಿಂದ ದೇವಾಲಯದ ಆವರಣವನ್ನು ಶೋಭಾಯಮಾನವಾಗಿ ಅಲಂಕರಿಸಲಾಗಿದ್ದು, ಭಕ್ತರಿಗೆ ವಿಶೇಷ ಆಕರ್ಷಣೆಯಾಗಿದೆ.

ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ, ಲೋಕಸಭಾ ಸದಸ್ಯ ತೇಜಸ್ವಿ ಸೂರ್ಯ, ಶಾಸಕರಾದ ಸಿ. ಕೆ. ರಾಮಮೂರ್ತಿ, ಟ್ರಸ್ಟ್ ಅಧ್ಯಕ್ಷ ಕೃಷ್ಣಂರಾಜು, ಕಾರ್ಯದರ್ಶಿ ಸತ್ಯನಾರಾಯಣ ರಾಜು, ಖಜಾಂಚಿ ಗೋವಿಂದರಾಜು, ಸಹಾಯಕರಾದ ಸುಂದರರಾಜು ಹಾಜರಿದ್ದರು ಮತ್ತು ಸಂಕ್ರಾಂತಿ ಪೂಜಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಸಾಮೂಹಿಕ ಮಕರ ಸಂಕ್ರಾಂತಿ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರು ಮತ್ತು ಭಕ್ತರು ಭಾಗವಹಿಸಿದರು. ದಿನವಿಡೀ ಗಣಪತಿ ಪೂಜೆ, ಮೃತ್ಯುಂಜಯ ಹೋಮ, ವಿಶೇಷ ಮಂಗಳಾರತಿ, ಅನ್ನಸಂತರ್ಪಣೆ ಮತ್ತು ಪ್ರಸಾದ ವಿನಿಯೋಗವನ್ನು ಆಯೋಜಿಸಲಾಗಿತ್ತು.

ಸಂಕ್ರಾಂತಿ ಅಂಗವಾಗಿ ಸಾಮೂಹಿಕ ಪೊಂಗಲ್ ಅಚರಣೆ ಕೂಡ ನೆರವೇರಿತು.  ಅಲಂಕರಿಸಿದ ಪೊಂಗಲ್ ಕುಂಡಗಳೊಂದಿಗೆ ಮೆರವಣಿಗೆ ನಡೆಸಿದ ದೃಶ್ಯ ದೇವಾಲಯದ ಆವರಣಕ್ಕೆ ಹೊಸ ಮೆರಗು ತಂದಿತು.

ಪೌರಾಣಿಕ ಇತಿಹಾಸ ಹೊಂದಿರುವ ಶ್ರೀ ಗುರುಲಿಂಗೇಶ್ವರ ದೇವಾಲಯದಲ್ಲಿ ಶಿವ, ವಿಷ್ಣು, ಬ್ರಹ್ಮ ಸಾನ್ನಿಧ್ಯದಲ್ಲಿ ಸಂಪ್ರದಾಯಬದ್ಧವಾಗಿ ಸಂಕ್ರಾಂತಿ ಆಚರಣೆ ಯನ್ನು ಶತಮಾನಗಳಿಂದ ಮುಂದುವರಿಸಲಾಗಿದೆ. ಹಿಂದೆ ದೇವಾಲಯದ ಸುತ್ತ ಹೊಲ, ಗದ್ದೆಗಳಲ್ಲಿ ಎಲ್ಲರೂ ಒಂದೇ ಕುಟುಂಬದಂತೆ ಸಂಕ್ರಾಂತಿ ಆಚರಿಸುತ್ತಿದ್ದರು; ಇದೇ ಪರಂಪರೆಯನ್ನು ಈಗಲೂ ಮುಂದುವರೆಸಲಾಗುತ್ತಿದೆ ಎಂದು ದೇವಸ್ಥಾನ ಟ್ರಸ್ಟ್ ಸದಸ್ಯರು ತಿಳಿಸಿದ್ದಾರೆ.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ