LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ತೆರಿಗೆ ದೇಶದ ಅಭಿವೃದ್ಧಿಗೆ ಬಳಕೆ ಆಗುತ್ತದೆ : ಅವ್ವಾರು ಮಂಜುನಾಥ್

ಬಳ್ಳಾರಿ : ಸರ್ಕಾರ ಸಂಗ್ರಹ ಮಾಡುವ ತೆರಿಗೆಯು ದೇಶದ ಸರ್ವಾಂಗೀಣ ಅಭಿವೃದ್ಧಿಗಾಗಿ ಬಳಕೆ ಆಗಲಿದೆ ಎಂದು ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಅವ್ವಾರು ಮಂಜುನಾಥ ಅವರು ತಿಳಿಸಿದ್ದಾರೆ.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ನೇತೃತ್ವದಲ್ಲಿ ಭಾರತ ಸರ್ಕಾರದ ಆದಾಯ ತೆರಿಗೆ ಇಲಾಖೆಯ ಬಳ್ಳಾರಿ ಕಚೇರಿಯು ವ್ಯಾಪಾರಿಗಳು ಮತ್ತು ವಾಣಿಜ್ಯೋದ್ಯಮಿಗಳ ಜೊತೆ ಶುಕ್ರವಾರ ನಡೆಸಿದ `ಔಟ್ ರೀಚ್' ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ಎಲ್ಲಾ ರೀತಿಯ ತೆರಿಗೆಗಳು ದೇಶದ ಆರ್ಥಿಕ ಸಂಪನ್ಮೂಲಗಳು. ದೇಶದ ಆರ್ಥಿಕ ಭವಿಷ್ಯವನ್ನು ನಿರ್ಧರಿಸುವಲ್ಲಿ - ಅಭಿವೃದ್ಧಿ ಯೋಜನೆಗಳನ್ನು ರೂಪಿಸುವಲ್ಲಿ ತೆರಿಗೆಯನ್ನು ದೇಶದ ಭದ್ರತೆ, ಅಭಿವೃದ್ಧಿ, ವಿಜ್ಞಾನ, ಆರೋಗ್ಯ, ಶಿಕ್ಷಣ, ಆಡಳಿತ, ರಸ್ತೆ, ಕೃಷಿ, ಕೈಗಾರಿಕೋದ್ಯಮ, ಮೂಲಭೂತ ಸೌಲಭ್ಯಗಳು ಹೀಗೇ ಹತ್ತಾರು ಕ್ಷೇತ್ರಗಳಲ್ಲಿ ವಿನಿಯೋಗ ಆಗುತ್ತಿವೆ ಎಂದರು.



ಆದರೆ, ಆದಾಯ ತೆರಿಗೆಯ ಹೊಸ ಕಾಯ್ದೆಗಳು, ನೀತಿಗಳು - ನಿಯಮಗಳು ಮತ್ತು ಷರತ್ತುಗಳ ಕುರಿತು ಹೆಚ್ಚಿನ ಜ್ಞಾನದ ಅಗತ್ಯವಿದೆ. ಈ ಕ್ಷೇತ್ರದ ಪರಿಣಿತರ ಜೊತೆಯಲ್ಲಿ ಚರ್ಚೆ ನಡೆಸಿ ಆದಾಯ ತೆರಿಗೆಯ ಸಮಗ್ರ ಮಾಹಿತಿ ಪಡೆದು, ಸಮಸ್ಯೆಗಳಿಗೆ ಪರಿಹಾರ ಪಡೆದಲ್ಲಿ ನೆಮ್ಮದಿ ಸಿಗಲಿದೆ ಎಂದರು.

 

ಬಳ್ಳಾರಿಯ ಆದಾಯ ತೆರಿಗೆ ಇಲಾಖೆಯ ಡೆಪ್ಯುಟಿ ಕಮೀಷನರ್ ಆಫ್ ಇನ್‍ಕಂಟ್ಯಾಕ್ಸ್ ಶಿವಶಂಕರ್ ಅವರು, ಆದಾಯ ತೆರಿಗೆ ಪಾವತಿ ಇಲಾಖೆಯಲ್ಲಿ ಆರ್ಟಿಫಿಷಿಯಲ್ ಇಂಟಲಿಜೆನ್ಸಿ (ಏಐ) ಬಳಕೆ ಮಾಡಲಾಗುತ್ತಿದೆ. ತೆರಿಗೆ ಪಾವತಿಯ ಕುರಿತು ಎಲೆಕ್ಟ್ರಾನಿಕ್ ಸಂವಹನ (ಇ-ಮೇಲ್) ಬಳಕೆ ಆಗುತ್ತಿದೆ. ತೆರಿಗೆ ಪಾವತಿದಾರರು ಎಚ್ಚೆತ್ತುಕೊಳ್ಳಬೇಕು ಎಂದು ಹೇಳಿದರು.

 

ಆದಾಯ ತೆರಿಗೆ ಅಧಿಕಾರಿ ಸತ್ಯನಾರಾಯಣ ಅವರು, ಆದಾಯ ತೆರಿಗೆ ಇಲಾಖೆಯ ಹೊಸ ಕಾಯ್ದೆಗಳು, ನಿಯಮಗಳು - ನೀತಿಗಳನ್ನು ವಿವರಿಸಿ, ಇಲಾಖೆಯ ಸೌಲಭ್ಯಗಳನ್ನು - ರಿಯಾಯಿತಿಗಳು, ಇನ್ನಿತರೆಗಳನ್ನು ವಿವರಿಸಿ, ಸಭೆಯಲ್ಲಿ ಪಾಲ್ಗೊಂಡಿದ್ದವರಲ್ಲಿ ಎಸ್. ದೊಡ್ಡನಗೌಡ, ಡಾ. ಮರ್ಚೆಡ್ ಮಲ್ಲಿಕಾರ್ಜುನ ಗೌಡ, ಅನಂತುಲ ಸುಧಾಕರ, ಜಿ. ರಾಘವೇಂದ್ರ ರೆಡ್ಡಿ, ಎಚ್. ಮಹಾರುದ್ರಗೌಡ, ಕೃಷ್ಣಕಾಂತ್ ಅವರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದರು.

 

ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ತೆರಿಗೆ ಕಮಿಟಿ ಚೇರ್ಮೆನ್ ಸಿಎ ಕೆ. ರಾಜಶೇಖರ ಅವರು ಸ್ವಾಗತ ಕೋರಿದರು. ಬಳ್ಳಾರಿ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಗೌರವ ಕಾರ್ಯದರ್ಶಿ ಕೆ.ಸಿ. ಸುರೇಶಬಾಬು ಅವರು ವಂದಿಸಿದರು.

 

ಈ ಸಭೆಯಲ್ಲಿ ಉಪಾಧ್ಯಕ್ಷರಾದ ಸೊಂತ ಗಿರಿಧರ್, ಜಂಟಿ ಕಾರ್ಯದರ್ಶಿಗಳಾದ ವಿ. ರಾಮಚಂದ್ರ, ಖಜಾಂಚಿಗಳಾದ ನಾಗಳ್ಳಿ ರಮೇಶ್, ವಿವಿಧ ಸಂಘಟನೆಗಳವರು, ಟ್ಯಾಕ್ಸ್ ಪ್ರಾಕ್ಟೀಷನರ್ಸ್ ಪಾಲ್ಗೊಂಡಿದ್ದರು.

 
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ