LIVE TV StateNationalPoliticsCrimeEntertainmentSportsEducationFINANCE & TAXATION
Districts Chitradurga

ಮುಂದಿನ ಸಿಎಂ ಜಾರಕಿಹೊಳಿ ಆಗಲಿದ್ದಾರೆ: ಅದಕ್ಕೆ ಬಿಜೆಪಿಯವರಿಗೆ ಭಯ

ನಾಯಕನಹಟ್ಟಿ : 2028ರಲ್ಲಿ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುತ್ತಾರೆ ಎಂಬ ಭಯ ಬಿಜೆಪಿಯನ್ನು ಕಾಡುತ್ತಿದೆ. ದೇಶಾದ್ಯಂತ ವಿರೋಧ ಪಕ್ಷಗಳ ನಾಯಕರನ್ನು ಗುರಿಯಾಗಿಸಿಕೊಂಡು ಇಡಿ, ಸಿಬಿಐನಂತಹ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳಲಾಗುತ್ತಿದೆ ಎಂದು ದ್ರಾಕ್ಷಿ ರಸ ನಿಗಮ ಮಂಡಳಿ ಅಧ್ಯಕ್ಷ ಡಾ||ಯೋಗೇಶ್ ಬಾಬು ಆರೋಪಿಸಿದರು.

 

ಸುಳ್ಳು ದಾಖಲೆಗಳನ್ನು ಸೃಷ್ಟಿಸಿ ತೇಜೋವಧೆ ಮಾಡುವ ಹುನ್ನಾರ ನಡೆಯುತ್ತಿದ್ದು, ಇಂತಹ ದಾಳಿಗಳಿಂದ ಕಾಂಗ್ರೆಸ್ ನಾಯಕರು ಹೆದರುವುದಿಲ್ಲ. ಇದುವರೆಗೂ ಕೇಂದ್ರ ಸರ್ಕಾರ ನಡೆಸಿದ ಇಡಿ ದಾಳಿಯಲ್ಲಿ ಹೆಚ್ಚು ಬಲಿಯಾದವರು ನಮ್ಮ ಕಾಂಗ್ರೆಸ್ ಮಾತ್ರ. ಇದು ಹೀಗೆ ಮುಂದುವರಿಯುವುದು ಸರಿಯಲ್ಲ ಎಂದು ಎಚ್ಚರಿಸಿದರು.

 

ವಿರೋಧ ಪಕ್ಷಗಳ ನಾಯಕರನ್ನು ಹತ್ತಿಕ್ಕುವ ಉದ್ದೇಶದಿಂದಲೇ ಇಂತಹ ದಾಳಿಗಳು ನಿರಂತರವಾಗಿ ನಡೆಯುತ್ತಿವೆ. ತನಿಖೆಗಳ ಹೆಸರಿನಲ್ಲಿ ದಲಿತ ಹಾಗೂ ಹಿಂದುಳಿದ ವರ್ಗಗಳ ಪ್ರಬಲ ಧ್ವನಿಯನ್ನು ಅಡಗಿಸಲು ಬಿಜೆಪಿ ಪ್ರಯತ್ನಿಸುತ್ತಿದೆ. 31 ಗಂಟೆಗಳ ಕಾಲ ತಪಾಸಣೆ ನಡೆಸಿದರೂ ಯಾವುದೇ ಅಕ್ರಮ ಪತ್ತೆಯಾಗಿಲ್ಲ, ಜನತೆ ಈ ರಾಜಕೀಯ ಪಿತೂರಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ. ಇಂತಹ ಸೇಡಿನ ರಾಜಕಾರಣ ಮುಂದುವರಿದರೆ ಮುಂಬರುವ ದಿನಗಳಲ್ಲಿ ರಾಜ್ಯವ್ಯಾಪಿ ಉಗ್ರ ಹೋರಾಟ ರೂಪಿಸಲಾಗುವುದು ಎಂದರು.

 

ಸತೀಶ್ ಜಾರಕಿಹೊಳಿ ಅವರು ರಾಜ್ಯ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿದ್ದು ಆಹಿಂದ ನಾಯಕ ಎಂದು ಗುರುತಿಸಿಕೊಂಡಿದ್ದಾರೆ. ಇಂತಹ ನಾಯಕರನ್ನು ರಾಜಕೀಯವಾಗಿ ಹತ್ತಿಕ್ಕುವ ಉದ್ದೇಶದಿಂದ ತನಿಖ ಸಂಸ್ಥೆಗಳನ್ನು ಬಳಸಿಕೊಳ್ಳಲಾಗುತ್ತದೆ ಎಂದು ಆರೋಪಿಸಿದರು. ಸತೀಶ್ ಜಾರಕಿಹೊಳಿಯವರು ಪ್ರಭಾವಿ ನಾಯಕರು ಆಗಾಗಿ ಬಿಜೆಪಿಯವರು ಬಹಳ ದಿನಗಳಿಂದ ಅವರ ಮೇಲೆ ಕಣ್ಣೀಟ್ಟಿದ್ದರು ಆದರೆ ಅದು ಸಾಧ್ಯವಾಗಲಿಲ್ಲ ಎನ್ನುವ ಕಾರಣಕ್ಕೆ ಈ ರೀತಿ ಇಡಿ ದಾಳಿ ಮಾಡಿಸಿದ್ದಾರೆ. ಈ ದಾಳಿಯನ್ನು ಇಲ್ಲಿಗೆ ನಿಲ್ಲಸಬೇಕು ಎಂದು ಡಾ|| ಯೋಗೇಶ್ ಬಾಬು ಆಗ್ರಹಿಸಿದರು.

Rakesh V
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ