LIVE TV StateNationalPoliticsCrimeEntertainmentSportsEducationFINANCE & TAXATION
State News

ಸರಕಾರದಿಂದ ಜನರಿಗೆ ನ್ಯಾಯ ಒದಗಿಸುವ ಕೆಲಸ

ಕಲಬುರ್ಗಿ: ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದುಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದರು.

 

ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಉತ್ತರಿಸಿದರು.

 

ಬರಗಾಲಕ್ಕೆ ಸಿಲುಕಿರುವ ಕಲ್ಯಾಣ ಕರ್ನಾಟಕದ ಭಾಗಕ್ಕೆ ಸರಕಾರದ ಕೊಡುಗೆ ಏನು ಎಂದು ಕೇಳಿದಾಗ, “ನಾನು ಬರಗಾಲ ಪರಿಸ್ಥಿತಿ ಅವಲೋಕಿಸಲು ಕಲ್ಯಾಣ ಕರ್ನಾಟಕ ಭಾಗಕ್ಕೆ ಬಂದಿದ್ದೇನೆ. ಇಲ್ಲಿನ ಜನರು ಮತ್ತು ಜನಪ್ರತಿನಿಧಿಗಳನ್ನು ಭೇಟಿ ಮಾಡಿದ್ದೇನೆ. ಇಲ್ಲಿನ ಪರಿಸ್ಥಿತಿಯ ಅವಲೋಕನಕ್ಕೆ ಸಭೆ ನಡೆಸುತ್ತಿದ್ದೇನೆ. ಅದೇ ರೀತಿ ಎರಡು ಮೂರು ದಿನ ಬಿಟ್ಟು ಬೆಳಗಾವಿಗೂ ಭೇಟಿ ನೀಡುತ್ತಿದ್ದೇನೆಎಂದರು.

 

ಸಮಸ್ಯೆ ಬಗೆಹರಿಸಬೇಕು ಎಂದು ಜನರು ಬೇಡಿಕೆಗಳನ್ನು ಮಂಡಿಸಿದ್ದಾರೆ. ಅವರ ಸಮಸ್ಯೆ ಆಲಿಸಲು ಹೊಸದಾಗಿ ಪ್ರಜಾಸೇವಾ ಇಲಾಖೆ ಸ್ಥಾಪಿಸಿ, ಸಚಿವರನ್ನು ನೇಮಕ ಮಾಡಿ, ಜನರ ಅರ್ಜಿಗಳನ್ನು ಪರಿಶೀಲಿಸಿ ಅವರಿಗೆ ಸಾಧ್ಯವಾದಷ್ಟು ನ್ಯಾಯ ಒದಗಿಸುವ ಕೆಲಸವನ್ನು ಸರ್ಕಾರ ಮಾಡುತ್ತದೆಎಂದರು.

news_1783422006_0_968.webp

 

ಇದಕ್ಕೂ ಮೊದಲು ಮುಖ್ಯಮಂತ್ರಿಯವರು ಕಲಬುರ್ಗಿ ಸರಕಾರಿ ಅತಿಥಿ ಗೃಹದ ಆವರಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಿದರು. ಇದೇ ಸಂದರ್ಭದಲ್ಲಿ ರೈತರು ಕಬ್ಬಿನ ಜಲ್ಲೆ ಜತೆಗೆ ತಮ್ಮ ಅಹವಾಲುಗಳನ್ನು ನೀಡಿದರು. ಮಳೆ ಕೊರತೆ ಉಂಟಾಗಿದೆ, ಬರಗಾಲ ಪೀಡಿತ ಎಂದು ಘೋಷಣೆ ಮಾಡಿ ಎಂದು ರೈತರು ಮನವಿ ಮಾಡಿದರು. “ ಪರಿಸ್ಥಿತಿಯನ್ನು ಕಣ್ಣಾರೆ ನೋಡಲೆಂದೇ ನಾನು ಇಲ್ಲಿಗೆ ಬಂದಿದ್ದೇನೆ. ನಿಮ್ಮ ಪರಿಸ್ಥಿತಿ ನನಗೆ ಅರ್ಥವಾಗುತ್ತದೆಎಂದರು.

 

ರೈತರ ಸಾಲ ಮನ್ನಾ ವಿಚಾರ ಹಾಗೂ ತಮಿಳುನಾಡು, ಮಹಾರಾಷ್ಟ್ರಗಳಲ್ಲಿ ರೈತರ ಸಾಲ ಮನ್ನಾ ಮಾಡಿರುವ ಬಗ್ಗೆ ಕೇಳಿದಾಗ, “ಎಲ್ಲಿಯ ಸಾಲ, ಯಾವ ಸಾಲ ಎಂಬುದನ್ನು ಪರಿಶೀಲನೆ ಮಾಡೋಣಎಂದರು.

Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮನೆ ಬಾಗಿಲಲ್ಲೇ ಜನರ ಸಮಸ್ಯೆ ಆಲಿಕೆಗೆ 'ಪ್ರಜಾಸೇವೆ': ಬಳ್ಳಾರಿ ಶಾಸಕ ನಾರಾ ಭರತ್ ರೆಡ್ಡಿಬಳ್ಳಾರಿಯಲ್ಲಿ ಮೂರನೇ ಮೆಗಾ ಲೋಕ ಅದಾಲತ್: 35,679 ಪ್ರಕರಣಗಳು ಬಾಕಿಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರಹಾವು ಕಡಿತದಿಂದ ಸಾವು-ನೋವು ತಪ್ಪಿಸಲು ತಕ್ಷಣ ಆಸ್ಪತ್ರೆಗೆ ದಾಖಲಾಗಿ: ಡಾ. ಮರಿಯಂಬಿ ವಿ.ಕೆ ಕರೆಮಹಾರಾಣಿ ಕ್ಲಸ್ಟರ್ ವಿವಿಯ ಪ್ರಭಾರ ಕುಲಪತಿಯಾಗಿ ಡಾ. ಮಮತಾ ಬಿ. ಅಧಿಕಾರ ಸ್ವೀಕಾರಪೋತಲಕಟ್ಟಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟಕ್ಕೆ ಆಯ್ಕೆ.ಪ್ರಜಾಸೇವೆ ಅಭಿಯಾನಕ್ಕೆ ಶಾಸಕ ಎನ್.ವೈ.ಗೋಪಾಲಕೃಷ್ಣ ಚಾಲನೆಆರೋಗ್ಯಕರ ಜೀವನಶೈಲಿಯಿಂದ ಕ್ಯಾನ್ಸರ್ ತಡೆಗಟ್ಟಬಹುದು-ಡಾ. ನಿಗ್ಗುಡಗಿವಿಜಯರಾಘವೆಂದ್ರ ಅಭಿನಯದ “ರುದ್ರಾಭಿಷೇಕಂ’ ಚಿತ್ರದ ಟ್ರೈಲರ್ ಬಿಡುಗಡೆ ಪಠ್ಯದ ಜೊತೆಗೆ ಮೌಲ್ಯವರ್ಧಿತ ಕೋರ್ಸಗಳ ಆಯ್ಕೆ ಬಹುಮುಖ್ಯ-ಯಡ್ರಾಮಿ