LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಸಾಮಾಜಿಕ ಮೌಲ್ಯಗಳ ಪುನರ್ ಸ್ಥಾಪನೆ ಅಗತ್ಯ

15 ವರ್ಷಗಳಿಂದ 1860ಕ್ಕೂ ಅಧಿಕ ಶಿಕ್ಷಣ ಸಂಸ್ಥೆಗಳಿಗೆ ಭೇಟಿ ನೀಡಿದ್ದು, ಪೈಕಿ ಕಳಿಂಗ ಶಿಕ್ಷಣ ಸಂಸ್ಥೆ ಸರ್ವಶ್ರೇಷ್ಠವಾದದ್ದ: ಜಸ್ಟೀಸ್ ಸಂತೋಷ್ ಹೆಗ್ಡೆ

ಭುವನೇಶ್ವರ : ಸಮಾಜದಲ್ಲಿ ಸಾಮಾಜಿಕ ಮೌಲ್ಯಗಳು ಪತನವಾಗುತ್ತಿದ್ದು, ಇದರ ಪರಿಣಾಮ ಮುಂದಿನ ಪೀಳಿಗೆಯ ಮೇಲೆ ಉಂಟಾಗಲಿದೆ ಎಂದು ಲೋಕಾಯುಕ್ತ ನಿವೃತ್ತ ನ್ಯಾಯಮೂರ್ತಿ ಜಸ್ಟೀಸ್ ಸಂತೋಷ್ ಹೆಗ್ಡೆ ಹೇಳಿದ್ದಾರೆ.

ಭುವನೇಶ್ವರದ ಕಿಸ್, ಕಿಟ್ ಮತ್ತು ಕಿಮ್ಸ್ ಶಿಕ್ಷಣ ಸಂಸ್ಥೆಯಿಂದ ಸ್ಕೂಲ್ ಆಫ್ ಲಾ ಸಭಾಂಗಣದಲ್ಲಿ ಆಯೋಜಿಸಿದ್ದ “ಸಾಮಾಜಿಕ ಮೌಲ್ಯಗಳ ಪತನ ಮತ್ತದರ ಪರಿಣಾಮಗಳು” ಕುರಿತು ಉಪನ್ಯಾಸ ನೀಡಿದ ಅವರು, ವಿದ್ಯಾರ್ಥಿಗಳಿಗೆ ನೈತಿಕ ಶಿಕ್ಷಣ ದೊರೆಯುತ್ತಿಲ್ಲ. ಪ್ರತಿಯೊಂದು ವೃತ್ತಿಯಲ್ಲೂ ಮೌಲ್ಯಗಳು ಕ್ಷೀಣಿಸುತ್ತಿವೆ. ಇದರಿಂದ ಭ್ರಷ್ಟಾಚಾರ ಸೇರಿ ಹಲವು ಜ್ವಲಂತ ಸಮಸ್ಯೆಗಳು ತಲೆದೋರುತ್ತಿವೆ. ಮೌಲ್ಯಗಳ ಪುನರ್ ಸ್ಥಾಪನೆ ಇಂದಿನ ಅಗತ್ಯ ಎಂದರು. 



ಭ್ರಷ್ಟಾಚಾರಿಗಳಿಗೆ ಕಾನೂನಿನ ಹೆದರಿಕೆ ಇಲ್ಲವಾಗಿದೆ. ವಿದ್ಯಾವಂತರಿಂದಲೇ ಈ ಪಿಡುಗು ವೃದ್ಧಿಸುತ್ತಿರುವುದು ಮತ್ತಷ್ಟು ಕಳವಳ ತಂದಿದೆ. ಶಿಕ್ಷಣ ಸಂಸ್ಥೆಗಳು ವಿದ್ಯೆಯ ಜೊತೆ ವಿದ್ಯಾರ್ಥಿಗಳ ಉತ್ತಮ ವ್ಯಕ್ತಿತ್ವ ನಿರ್ಮಾಣಕ್ಕೆ ಆದ್ಯತೆ ನೀಡಬೇಕು. ಬ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಲು ಯುವ ಸಮೂಹ ಮುಂದಾಗಬೇಕು. ಶಿಕ್ಷಣ ಕ್ಷೇತ್ರ ಇಂದು ಅಗಾಧವಾಗಿ ಬೆಳವಣಿಗೆಯಾಗುತ್ತಿದ್ದು, ರಾಷ್ಟ್ರ ನಿರ್ಮಾಣದಲ್ಲಿ ಶಿಕ್ಷಣ ಸಂಸ್ಥೆಗಳ ಪಾತ್ರ ಅನನ್ಯ ಎಂದು ಹೇಳಿದರು.

ಕಳೆದ 15 ವರ್ಷಗಳಲ್ಲಿ 1860ಕ್ಕೂ ಅಧಿಕ ಶಾಲೆಗಳು, ಶಿಕ್ಷಣ ಸಂಸ್ಥೆಗಳಿಗೆ ತಾವು ಭೇಟಿ ನೀಡಿದ್ದು, ಈ ಪೈಕಿ ಕಳಿಂಗ ಶಿಕ್ಷಣ ಸಂಸ್ಥೆ ಸರ್ವಶ್ರೇಷ್ಠವಾದದ್ದು. ಏಕೆಂದರೆ ಇಲ್ಲಿ ವಿದ್ಯಾರ್ಥಿಗಳಿಗೆ ಸಮಗ್ರ ಶಿಕ್ಷಣ ದೊರೆಯುತ್ತಿದೆ. ಬುಡಕಟ್ಟು ಸಮುದಾಯ, ಬಡವರು, ಬಲ್ಲಿದರು ಸೇರಿದಂತೆ ಪ್ರತಿಯೊಬ್ಬರಿಗೂ ಒಂದೇ ಸೂರಿನಡಿ ಸಮಗ್ರ ಶಿಕ್ಷಣ ದೊರೆಯುತ್ತಿದೆ. 20 ಸಾವಿರಕ್ಕೂ ಅಧಿಕ ಬೋಧಕರು, ಬೋಧಕೇತರರ ಬಹುದೊಡ್ಡ ಶೈಕ್ಷಣಿಕ ನಿಧಿ ಇದಾಗಿದೆ. ಅಧಿಕ ಪ್ರಮಾಣದಲ್ಲಿ ಬಡವರಿಗೆ ಉಚಿತ ಊಟ, ವಸತಿ, ಶಿಕ್ಷಣ ದೊರೆಯುತ್ತಿರುವುದು ಶ್ಲಾಘನೀಯ. ಕಳಿಂಗ ಶಿಕ್ಷಣ ಸಂಸ್ಥೆಯ ಮುಖ್ಯಸ್ಥ ಅಚ್ಯುತಾ ಸಮಂತ್ ದೇಶದಲ್ಲೆಲ್ಲೂ ಕಂಡು ಕೇಳರಿಯದ ದೊಡ್ಡ ಪ್ರಮಾಣದ ಹೊರೆಯನ್ನು ತಮ್ಮ ಭುಜದ ಮೇಲೆ ಹೊತ್ತುಕೊಂಡಿದ್ದಾರೆ.  ಹೀಗಾಗಿ ಇವರನ್ನು “ಅಟ್ಲಾಸ್‌ [ಭೂಮಂಡಲ] ಸಮಂತ” ಎಂದು ಕರೆಯಲು ಇಚ್ಚಿಸುತ್ತೇನೆ. ಎಲ್ಲಾ ರೀತಿಯಿಂದಲೂ ಈ ಶಿಕ್ಷಣ ಸಂಸ್ಥೆ ಅತ್ಯುತ್ತಮವಾಗಿದೆ ಎಂದು  ಮೆಚ್ಚುಗೆ ವ್ಯಕ್ತಪಡಿಸಿದರು.



ಸ್ಕೂಲ್ ಆಫ್ ಲಾ ನಿರ್ದೇಶಕ ಫ್ರೊ.ರೋಸ್ ವರ್ಗೀಸ್, ಪ್ರಾಧ್ಯಾಪಕರಾದ ಪ್ರೋ ಎನ್.ಎಲ್. ಮಿತ್ರ ಮತ್ತಿತರರು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ