LIVE TV LocalStateNationalPoliticsEntertainmentSportsFINANCE & TAXATION EducationCrimeArticlesTechnology

ಹಂಪಿ ವಿರೂಪಾಕ್ಷೇಶ್ವರ ದರ್ಶನ ಪಡೆದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್

ವಿಜಯನಗರ: ವಿಶ್ವವಿಖ್ಯಾತ ಹಂಪಿ ವಿರೂಪಾಕ್ಷ ದೇವಸ್ಥಾನಕ್ಕೆ ಕೇಂದ್ರ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ನಿರ್ಮಲಾ ಸೀತಾರಾಮನ್ ಅವರು ಭೇಟಿ ನೀಡಿ ಪಂಪಾಪತಿ, ಪಂಪಾಭಿಕೆ ಮತ್ತು ನಾಡದೇವತೆ ಭುವನೇಶ್ವರಿ ದರ್ಶನವನ್ನು ಬುಧವಾರ ಪಡೆದರು.

 

ಹಂಪಿಯ ವಿರೂಪಾಕ್ಷ ಗೋಪುರದ ಮುಖ್ಯದ್ವಾರದಲ್ಲಿ ದೇಗುಲದ ಆನೆ ಲಕ್ಷಿö??Ã ಮಾಲಾರ್ಪಣೆ ಮಾಡುವ ಮೂಲಕ ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ಸ್ವಾಗತಿಸಲಾಯಿತು. ದೇಗುಲದೊಳಗಡೆ ಪುರೋಹಿತರಾದ ವೇದಬ್ರಹ್ಮ ಮೋಹನ್ ಚಿಕ್ಕಭಟ್ ಜೋಷಿ ಅವರು ವಿಜಯನಗರದ ಧಾರ್ಮಿಕ ಕೇಂದ್ರಗಳ ಮಹತ್ವ, ಸಾಮ್ರಾಜ್ಯದ ಅರಸರ ಕೊಡುಗೆಗಳು ಮತ್ತು ಐತಿಹಾಸಿಕ ಸ್ಮಾರಕಗಳ ಬಗ್ಗೆ ವಿಶ್ಲೇಷಿಸಿದರು. ಸಚಿವೆ ನಿರ್ಮಲಾ ಸೀತಾರಾಮನ್ ವಿಜಯನಗರದ ಪ್ರಮುಖ ಆರಸ ಶ್ರೀಕೃಷ್ಣದೇವರಾಯರನ್ನು ಸ್ಮರಿಸಿದರು. ವಿಜಯನಗರ ಸಾಮ್ರಾಜ್ಯದ ಆಡಳಿತ, ಕಲೆ, ವಾಸ್ತುಶಿಲ್ಪಕ್ಕೆ ನೀಡಿದ ಕೊಡುಗೆ ಅಪಾರವಾಗಿದ್ದು ಇದು ವಿಶ್ವ ಪಾರಂಪರಿಕ ತಾಣವಾಗಿದೆ. ಇಲ್ಲಿನ ಸ್ಮಾರಕಗಳನ್ನು ಸಂರಕ್ಷಣೆ ಮಾಡುವ ಮೂಲಕ ಗತವೈಭವವನ್ನು ಮರುಸ್ಥಾಪಿಸೋಣ ಎಂದರು.



ಈ ವೇಳೆ ಹಂಪಿ ವಿರೂಪಾಕ್ಷ ವಿದ್ಯಾರಣ್ಯ ಮಹಾಸಂಸ್ಥಾನ ಪೀಠಾಧಿಪತಿಗಳಾದ ಶ್ರೀವಿದ್ಯಾರಣ್ಯ ಭಾರತಿ ಸ್ವಾಮೀಜಿ, ಸಂಸದ ಈ.ತುಕಾರಾಮ್, ಜಿಲ್ಲಾಧಿಕಾರಿ ಕವಿತಾ.ಎಸ್.ಮನ್ನಿಕೇರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನೋಂಗ್ಜಾಯ್ ಮೊಹಮ್ಮದ್ ಅಕ್ರಮ್ ಅಲಿ ಷಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಸ್.ಜಾಹ್ನವಿ, ಹೊಸಪೇಟೆ ಸಹಾಯಕ ಆಯುಕ್ತ ಪಿ.ವಿವೇಕಾನಂದ, ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕ ಪ್ರಭುಲಿಂಗ.ಎಸ್.ತಳಕೇರಿ, ಧಾರ್ಮಿಕ ದತ್ತಿ ಇಲಾಖೆ ಸಹಾಯಕ ನಿರ್ದೇಶಕ ಹನುಮಂತಪ್ಪ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.
Author
Visva Nudi
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಒಲಿಂಪಿಯಾಡ್ ಪ್ರಮಾಣ ಪತ್ರ ವಿತರಣೆಹೆಚ್ಚಿನ ಇಳುವರಿ ಮತ್ತು ದೀರ್ಘಾವಧಿ ಲಾಭಕ್ಕಾಗಿ 'ಅಂಗಾಂಶ ಕೃಷಿ ಬಾಳೆ ಬೇಸಾಯ'ಕ್ಕೆ ರೈತರು ಮುಂದಾಗಿಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಿಸಿಜೀವನದಲ್ಲಿ ಆಸೆಯೂ ಬೇಕು, ಸಾಕು ಎಂಬ ಭಾವವೂ ಬೇಕುನೇರಳೆ ಗಿಡಗಳ ಮಾರಣಹೋಮ ಸರ್ಕಾರಿ ಮುದ್ರಣ ತಂತ್ರಜ್ಞಾನ ಸಂಸ್ಥೆಯಲ್ಲಿ ಸೇವಾ ನಿವೃತ್ತಿ ಹೊಂದಿದ್ದ ಡಾ. ಎಸ್. ವಿಜಯ್ ಕುಮಾರ್ ರವರಿಗೆ ಸನ್ಮಾನ ವಿಜಯನಂದ ಕಾಶಪ್ಪನವರ ಅವರಿಗೆ ಸಚಿವ ಸ್ಥಾನ ಹಾಗೂ ವೀಣಾ ಕಾಶಪ್ಪನವರ ಅವರಿಗೆ ನಿಗಮ-ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಆಗ್ರಹ ಕನಿಷ್ಠ ವೇತನ ಜಾರಿಗಾಗಿ ಸಿಐಟಿಯು ನೇತೃತ್ವದಲ್ಲಿ ಬಳ್ಳಾರಿಯಲ್ಲಿ ಬೃಹತ್ ಪ್ರತಿಭಟನೆಬಳ್ಳಾರಿ ಪಾಲಿಕೆಯಲ್ಲಿ ಅಕ್ರಮ ಬಿ-ಖಾತೆ ವಿತರಣೆಯ ಆರೋಪಜೂನ್ 2ರಂದು ತುಂಗಭದ್ರ ಜಲಾಶಯದ ಹೂಳು ತೆರವಿಗೆ ರೈತರ ಸಾಂಕೇತಿಕ ಅಭಿಯಾನ